ಉಳ್ಳಾಲ, ನ 27 (DaijiworldNews/MS): ನೇತ್ರಾವತಿ ನದಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮಹಿಳೆಯ ಶವ ತೇಲುತ್ತಿರುವುದು ನ. 27 ರ ಶನಿವಾರ ಬೆಳಗ್ಗೆ ಪತ್ತೆಯಾಗಿದೆ.
ಉಳ್ಳಾಲದ ಕಿಂಗ್ಸ್ಟಾರ್ ಸೇವಾ ಸಮಿತಿಯ ಅಧ್ಯಕ್ಷ ಪ್ರೇಮ್ ಪ್ರಕಾಶ್ ಡಿಸೋಜ ಮತ್ತು ಸದಸ್ಯರಾದ ರಾಕೇಶ್ ಪ್ರಶಾಂತ್ ಡಿಸೋಜ, ಅನಿಲ್ ಮೊಂತೇರೊ ಮತ್ತು ನಿಶಾನ್ ಜಾಯ್ ಲೋಬೋ ಮೃತದೇಹವನ್ನು ಗಮನಿಸಿ ಉಳ್ಳಾಲ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಅಗತ್ಯ ವಿಧಿವಿಧಾನಗಳಿಗಾಗಿ ಮೃತದೇಹವನ್ನು ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.