ಮಂಗಳೂರು, ಉಡುಪಿ, ನ. 27 (DaijiworldNews/HR): ಕೊರೊನಾ ರೂಪಾಂತರ ಕುರಿತು ದ.ಕ, ಉಡುಪಿ ಸೇರಿದಂತೆ 7 ಜಿಲ್ಲೆಗಳ ಡಿಸಿಗಳೊಂದಿಗೆ ಸಿಎಂ ವಿಡಿಯೋ ಸಂವಾದ ಕಾರ್ಯಕ್ರಮ ಇಂದು ನಡೆಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಹಾಗೂ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್, "ಕೊರೊನಾ ನಿಯಂತ್ರಣಕ್ಕೆ ನಿಗಾವಹಿಸಲು ಸಿಎಂ ಸೂಚಿಸಿದ್ದು, ವಿದೇಶದಿಂದ ಬಂದ ಪ್ರಯಾಣಿಕರ ಮೇಲೆ ಹೆಚ್ಚಿನ ನಿಗಾ ವಹಿಸುತ್ತೇವೆ. ಆರ್ಟಿಪಿಸಿಆರ್ ಪರೀಕ್ಷೆಗಳೊಂದಿಗೆ ಎಲ್ಲಾ ಕಾಲೇಜು ಕ್ಯಾಂಪಸ್ ಮತ್ತು ಹಾಸ್ಟೆಲ್ಗಳ ಸ್ಕ್ರೀನಿಂಗ್ ಮತ್ತು ವೈದ್ಯಕೀಯ ಮತ್ತು ಅರೆ ವೈದ್ಯಕೀಯ ವಿದ್ಯಾರ್ಥಿಗಳಿಗೆ ವಿಶೇಷ ಒತ್ತು ನೀಡಲಾಗುವುದು" ಎಂದರು.
ದಕ್ಷಿಣ ಆಫ್ರಿಕಾ- ಹಾಂಗ್ ಕಾಂಗ್ ಸೇರಿದಂತೆ ಹೈರಿಸ್ಕ್ ದೇಶಗಳ ಮೇಲೆ ನಿಗಾ ಇಡಲಾಗಿದ್ದು, ಆರ್ಟಿಪಿಸಿಆರ್ ಟೆಸ್ಟ್ ಕಡ್ಡಾಯ ಮಾಡಲು ಸಿಎಂ ಸೂಚಿಸಿದ್ದು, ಎರಡು ಡೋಸ್ ವ್ಯಾಕ್ಸಿನ್ ಶೀಘ್ರ ಪೂರೈಸಲು ಹೇಳಿದ್ದಾರೆ" ಎಂದಿದ್ದಾರೆ.
ಇನ್ನು ಚೆಕ್ ಪೋಸ್ಟ್ಗಳನ್ನು ಸಕ್ರಿಯಗೊಳಿಸುವ ಮೂಲಕ ಗಡಿ ಪ್ರದೇಶದಲ್ಲಿ ಕಟ್ಟುನಿಟ್ಟಾದ ಕ್ರಮ ಜಾರಿಗೊಳಿಸಲಾಗುವುದು. ಕೇರಳದ ಮತ್ತು ಇತರ ರಾಜ್ಯ ಹಾಗೂ ದೇಶಗಳಿಂದ ಬರುವವರ ಬಗ್ಗೆ ಹೆಚ್ಚಿನ ನಿಗಾ ಇರಿಸಲಾಗುವುದು" ಎಂದರು.
"ಮಾಸ್ಕ್, ಸಾಮಾಜಿಕ, ಅಂತರ ಕೈ ಸ್ವಚ್ಛತೆ ನಾಗರಿಕರು ಪಾಲಿಸಬೇಕು. ಜಿಲ್ಲೆಯ ಜನ ಶೀಘ್ರ ವ್ಯಾಕ್ಸಿನೇಷನ್ ಮಾಡಿಸಿಕೊಂಡು ಸರಕಾರದ ನಿಯಮಾವಳಿಯನ್ನು ಕಡ್ಡಾಯ ಪಾಲಿಸಬೇಕು" ಎಂದು ಜಿಲ್ಲಾಧಿಕಾರಿಗಳು ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ.