ಕಾಸರಗೋಡು, ನ. 30 (DaijiworldNews/SM): ಸಿಡಿಲು ಬಡಿದು ಕಗ್ಗಲ್ಲು ಕ್ವಾರೆಯಲ್ಲಿ ಉಂಟಾದ ಸ್ಪೋಟದಲ್ಲಿ ಓರ್ವ ಕಾರ್ಮಿಕ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡ ಘಟನೆ ಮಂಗಳವಾರ ಸಂಜೆ ವೆಳ್ಳರಿಕುಂಡು ತಾಲೂಕಿನ ತಾಯನ್ನೂರು ಕೋಳಿಯಾರು ಎಂಬಲ್ಲಿ ನಡೆದಿದೆ.
ರಮೇಶ್(45) ಘಟನೆಯಲ್ಲಿ ಮೃತಪಟ್ಟವರು. ಪ್ರಭಾಕರ ಮತ್ತು ಸುಮಾ ಗಂಭೀರ ಗಾಯಗೊಂಡಿದ್ದಾರೆ. ಮೂವರು ಕ್ವಾರೆಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ಸಂಜೆ ನಾಲ್ಕು ಗಂಟೆ ಸುಮಾರಿಗೆ ಭಾರೀ ಗುಡುಗು ಮಿಂಚು ಸಹಿತ ಮಳೆ ಸುರಿದಿದ್ದು, ಈ ಸಂದರ್ಭದಲ್ಲಿ ಕೋರೆಗೆ ಸಿಡಿಲು ಬಡಿದಿದ್ದು, ಅಲ್ಲಿದ್ದ ಸ್ಪೋಟಕ ಸಿಡಿದು ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.
ಗಂಭೀರ ಗಾಯಗೊಂಡ ಮೂವರನ್ನು ಸಮೀಪದ ಆಸ್ಪತ್ರೆಗೆ ತಲುಪಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ರಮೇಶ್ ಮೃತಪಟ್ಟಿದ್ದಾರೆ. ಅಂಬಲತ್ತರ ಠಾಣಾ ಪೊಲೀಸರು ಸ್ಥಳಕ್ಕಾಗಮಿಸಿ ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.