ಉಡುಪಿ, ಡಿ.02 (DaijiworldNews/PY): "ನಮ್ಮ ಸರ್ಕಾರ ಗೋರಕ್ಷಣೆ ಮಾಡಲೆಂದೇ ಗೋಹತ್ಯಾ ನಿಷೇಧ ಕಾಯ್ದೆ ಜಾರಿಗೆ ತಂದಿದೆ. ಈ ಕಾಯ್ದೆ ಊರ್ಜಿತದಲ್ಲಿದೆ" ಎಂದು ರಾಜ್ಯ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಉಡುಪಿಯಲ್ಲಿ ಮಾತನಾಡಿದ ಅವರು, "ಅಕ್ರಮ ಗೋಸಾಗಾಟ ತಡೆಗಟ್ಟುವುದು ನಮ್ಮ ಜವಾಬ್ದಾರಿ. ನಮ್ಮ ಸರ್ಕಾರ ಅಧಿಕಾರದಲ್ಲಿದ್ದರೂ, ಗೋಹತ್ಯಾ ನಿಷೇಧ ಕಾಯ್ದೆ ಜಾರಿಯಲ್ಲಿದ್ದರೂ ಕೆಟ್ಟ ಶಕ್ತಿಗಳು ಅಕ್ರಮ ಗೋ ಮಾರಾದಲ್ಲಿ ತೊಡಗಿದೆ. ಕಾನೂನಿಗೆ ಸವಾಲು ಒಡ್ಡುವುದು, ಎದುರುವ ಬಂದವರಿಗೆ ನಡೆಸುತ್ತಿದ್ದಾರೆ. ಕೊಲೆಯತ್ನ ಕತ್ತಿ ತೋರಿಸಿ ಬೆದರಿಕೆ ನಡೆಸುತ್ತಿದ್ದಾರೆ. ನಮ್ಮ ಸರ್ಕಾರ ಯಾವುದಕ್ಕೂ ಬಗ್ಗುವುದಿಲ್ಲ" ಎಂದು ಗೃಹ ಸಚಿವರು ಹೇಳಿದ್ದಾರೆ ಎಂದರು.
"ತೀರ್ಥಹಳ್ಳಿ ಪ್ರಕರಣದ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಭರಿಸುತ್ತೇವೆ. ಗೋವಿನ ಹೆಸರಲ್ಲಿ ಕಾನೂನು ಕೈಗೆ ತೆಗೆದುಕೊಳ್ಳುವುದನ್ನು ಸಹಿಸುವುದಿಲ್ಲ. ತೀರ್ಥಹಳ್ಳಿಯಲ್ಲಿ ನಡೆದ ಘಟನೆ ಮರುಕಳಿಸದಂತೆ ಎಚ್ಚರ ವಹಿಸಬೇಕಾಗಿದೆ. ಇದು ನಮ್ಮ ಮುಂದಿರುವ ಜವಾಬ್ದಾರಿ" ಎಂದು ಹೇಳಿದರು.
ಹಿಂದುಳಿದ ವರ್ಗಗಳ ಹಾಸ್ಟೆಲ್ನಲ್ಲಿ ಅಡುಗೆ ಸಾಮಾಗ್ರಿ ಪೂರೈಕೆಯಲ್ಲಿ ಲೋಪ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಟೆಂಡರ್ಗಳಲ್ಲಿ ಲೋಪದೋಷ, ಅಕ್ರಮ ಗುತ್ತಿಗೆ, ಮಕ್ಕಳಿಗೆ ಕಳಪೆ ಆಹಾರ ವಿತರಣೆ ಆರೋಪಕ್ಕೆ ಸಂಬಂಧಿಸಿದಂತೆ ತಕ್ಷಣ ತನಿಖೆ ನಡೆಸಲು ಹಿರಿಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ. ಎಸಿಬಿ ಮೂಲಕ ತನಿಖೆ ನಡೆಸಲು ಸೂಚಿಸಿದ್ಧೇನೆ" ಎಂದರು.
"ತುಮಕೂರು ಸೇರಿಂದತೆ ಅಕ್ರಮ ನಡೆದಿರುವ ಜಿಲ್ಲೆಗಳಲ್ಲಿ ಅಧಿಕಾರಿಗಳ ಅಮಾನತು ವಿಚಾರಕ್ಕೆ ಸಂಬಂಧಿಸಿದಂತೆ, ತನಿಖೆ ಆಧಾರದಲ್ಲಿ ಸೂಕ್ತ ಹಾಗೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ಎಲ್ಲಾ ಪ್ರಕರಣಗಳ ತನಿಖೆಗೆ ಎಸಿಬಿಗೆ ಸೂಚಿಸಿದ್ದೇನೆ. ಈ ಕುರಿತು ಮುಖ್ಯಮಂತ್ರಿಗಳ ಜೊತೆಗೂ ದೂರವಾಣಿಯಲ್ಲಿ ಮಾತನಾಡಿದ್ಧೇನೆ. ಮಕ್ಕಳ ಆಹಾರ ವಿಚಾರದಲ್ಲಿ ಪಾರದರ್ಶಕತೆ ಪಾಲಿಸುತ್ತೇವೆ" ಎಂದು ತಿಳಿಸಿದರು.
ಮಕ್ಕಳಿಗೆ ಬಿಸಿಯೂಟದೊಂದಿಗೆ ಮೊಟ್ಟೆ ವಿತರಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು, "ಈ ವಿಚಾರದಲ್ಲಿ ನಮ್ಮ ನಡುವೆ ಯಾವುದೇ ಗೊಂದಲ್ಲ ಇಲ್ಲ. ಮೊಟ್ಟೆ ನೀಡುವ ಯೋಜನೆ ಮುಂದುವರಿಯಲಿದೆ" ಎಂದು ಹೇಳಿದರು.