ಧರ್ಮಸ್ಥಳ, ಡಿ.03 (DaijiworldNews/SM): ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಸಾಹಿತ್ಯ ಸಮ್ಮೇಳನ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ್ ಇಂದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಈ ವೇಳೆ ಮಾತನಾಡಿದ ಅವರು, ಇಂದು ಓಮಿಕ್ರಾನ್ ಸಭೆ ಮಾಡಿ ನಾನು ಇಲ್ಲಿಗೆ ಬಂದಿದ್ದೇನೆ. ಈ ಕ್ಷೇತ್ರದಲ್ಲಿ ನಿಂತು ಕೇಳುತ್ತೇನೆ. ಈ ಓಮೈಕ್ರಾನ್ ವೈರಸ್ ಸರಳವಾಗಿರಲಿ. ಸಾವು-ನೋವುಗಳು ಆಗದೇ ಇರಲಿ ಅಂತಾ ಬೇಡಿಕೊಳ್ಳುತ್ತೇನೆ ಎಂದರು.
ಇನ್ನು ಓಮೈಕ್ರಾನ್ ನಿಂದ ಆದಷ್ಟು ಬೇಗ ಮುಕ್ತಿ ಸಿಗಲಿ ಎಂದು ಶ್ರೀಮಂಜುನಾಥಸ್ವಾಮಿಯಲ್ಲಿ ಬೇಡಿಕೊಳ್ಳುತ್ತೇನೆ ಎಂದು ಧರ್ಮಸ್ಥಳದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ ನೀಡಿದ್ದಾರೆ.