ಕಾರ್ಕಳ, ಡಿ.04 (DaijiworldNews/PY): ಕಾರ್ಕಳ ವಕೀಲರ ಸಂಘದ ವತಿಯಿಂದ ವಕೀಲದ ದಿನಾಚರಣೆಯು ಕಾರ್ಕಳದ ವಕೀಲರ ಭವನದಲ್ಲಿ ಜರುಗಿತು.
ಪ್ರಧಾನ ಸಿವಿಲ್ ನ್ಯಾಯಾಧಿಶ ಚೇತನ.ಎಸ್.ಎಫ್. ದೀಪ ಬೆಳಗಿಸಿದರು. ವಕೀಲರ ಸಂಘದ ಅಧ್ಯಕ್ಷ ಸುನಿಲ್ ಕುಮಾರ್ ಶೆಟ್ಟಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ಸರ್ಕಾರಿ ಅಭಿಯೋಜಕರು ಶೋಭಾ ಎಂ.ನಾಯ್ಕ್, ವೈಕುಂಠ ಬಾಳಿಗ ಲಾ ಕಾಲೇಜ್ ಪ್ರಾಂಶುಪಾಲ ಪ್ರೊ.ಡಾ.ನಿರ್ಮಲ ಕುಮಾರಿ ಕೆ., ನ್ಯಾಯವಾದಿ ಎಂ.ಕೆ.ವಿಜಯಕುಮಾರ್ ಉಪಸ್ಥಿತರಿದ್ದರು.
ಈ ಸಂದರ್ಭ ನೂತನ ಸದಸ್ಯರನ್ನು ಗೌರವಿಸಲಾಯಿತು.
ಪ್ರಧಾನ ಕಾರ್ಯದರ್ಶಿ ಪದ್ಮಪ್ರಸಾದ್ ಜೈನ್.ಎನ್. ನಿರ್ವಹಿಸಿದರು. ಜತೆ ಕಾರ್ಯದರ್ಶಿ ಸವಿತಾ ಹೆಗ್ಡೆ ಸ್ವಾಗತಿಸಿದರು. ಉಪಾಧ್ಯಕ್ಷ ದಯಾನಂದ ನಾಯ್ಕ್ ವಂದಿಸಿದರು.