ಬ್ರಹ್ಮಾವರ, ಡಿ.05 (DaijiworldNews/HR): ಬ್ರಹ್ಮಾವರ ತಾಲೂಕು ಸೈಬ್ರಕಟ್ಟೆಯಲ್ಲಿ ಸಮೀಪ ಅಫೆ ಗೂಡ್ಸ್, ಕಾರು, ಬೈಕ್ ನಡುವೆ ಸರಣಿ ರಸ್ತೆ ಅಪಘಾತ ಸಂಭವಿಸಿದ್ದು ಓರ್ವ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡ ಘಟನೆ ನಡೆದಿದೆ.
ಮೃತರನ್ನು ಮಧುವನ ನಿವಾಸಿ ಸುರೇಶ ಮರಕಾಲ ಎಂದು ಗುರುತಿಸಲಾಗಿದೆ.
ಮೀನು ತುಂಬಿಕೊಂಡು ಸೈಬ್ರಕಟ್ಟೆ ಕಡೆ ಬರುತ್ತಿದ್ದ ಅಫೆ ಗೂಡ್ಸ್ ವಾಹನ ಜೆಸಿಬಿಯನ್ನು ಓವರ್ ಟೆಕ್ ಮಾಡುವ ಭರದಲ್ಲಿ ಬಾರಕೂರು ಕಡೆ ಬರುತ್ತಿದ್ದ ಸ್ವಿಪ್ಟ್ ಕಾರಿಗೆ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಮೀನು ತುಂಬಿದ ವಾಹನದ ಎಡಭಾಗದಲ್ಲಿ ಕುಳಿತಿದ್ದ ಸುರೇಶ ಮರಕಾಲ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಇನ್ನು ಅಫೆ ಗೂಡ್ಸ್ ವಾಹನದ ಚಾಲಕನೂ ಗಾಯಗೊಂಡಿದ್ದಾರೆ. ಇದೇ ವೇಳೆ ನಡುವೆ ಬೈಕ್ ಒಂದು ಸಿಲುಕಿಕೊಂಡಿದ್ದು, ಬೈಕ್ ಸವಾರನಿಗೆ ಕಾಲಿಗೆ ತೀವ್ರವಾದ ಪೆಟ್ಟಾಗಿದೆ. ಕಾರಿನಲ್ಲಿದ್ದ ಇಬ್ಬರೂ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.