ಕಾರ್ಕಳ, ಡಿ.05 (DaijiworldNews/PY): ಕರ್ನಾಟಕ ರಾಜ್ಯದ ವೈದ್ಯರು ಎದುರಿಸುತ್ತಿರುವ ಸಮಸ್ಯೆಗಳು, ಸವಾಲುಗಳನ್ನು ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಬಗೆಹರಿಸಲು ಪ್ರಯತ್ನ ನಡೆಸುವುದಾಗಿ ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ರಾಜ್ಯಾಧ್ಯಕ್ಷ ಡಾ. ಸುರೇಶ್ ಕುಡ್ವ ಹೇಳಿದರು.
ಕಾರ್ಕಳದ ಪ್ರಕಾಶ್ ಹೋಟೆಲ್ನ ಸಂಭ್ರಮದ ಸಭಾಂಗಣದಲ್ಲಿ ಕಾರ್ಕಳ ಘಟಕ ಆಯೋಜಿಸಿದ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಅಭಿನಂದನಾ ಭಾಷಣಗೈದ ಮಾಜಿ ಅಧ್ಯಕ್ಷ ಡಾ. ಕೆ.ಆರ್.ಜ್ಯೋಶಿ ಮಾತನಾಡಿ, ಕಳೆದ ಮೂವತ್ತು ವರ್ಷಗಳಿಂದ ವೃತ್ತ ರಂಗದಲ್ಲಿ ಸೇವೆಗೈಯುತ್ತಿರುವ ಡಾ. ಸುರೇಶ್ ಕುಡ್ವ ಅವರು ಸಂಘದ ಸಕ್ರಿಯಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ತಾಲೂಕು ಮಟ್ಟದಿಂದ ರಾಜ್ಯ ಮಟ್ಟದವರೆಗೆ ಸಂಘಟನೆಯ ಚುಕ್ಕಾಣಿ ಹಿಡಿಯುವಲ್ಲಿ ಅವರು ತೋರಿದ ಸಂಘಟನೆಯ ಚಾತುರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಾರ್ಕಳ ಘಟಕದ ಅಧ್ಯಕ್ಷ ಡಾ. ಅನಂತಕಾಮತ್ ಅವರು ಸಭೆಯ ಅಧ್ಯಕ್ಷತೆ ವಹಿಸಿದ ಮಾತನಾಡಿ, "ರಾಜಾಧ್ಯಕ್ಷರಿಗೆ ಪೂರ್ಣ ರೀತಿಯ ಸಹಕಾರ ನೀಡಲು ಕಾರ್ಕಳ ಘಟಕ ಬದ್ಧವಾಗಿದೆ" ಎಂದರು.
ಮಾಜಿ ಅಧ್ಯಕ್ಷ ಡಾ.ಜ್ಞಾನೇಶ್ ಕಾಮತ್, ಡಾ. ಸತೀಶ್ ನಾಯಕ್ ಉಡುಪಿ ಮೊದಲಾದವರು ಉಪಸ್ಥಿತರಿದ್ದರು.
ಡಾ. ಚಂದ್ರಿಕಾ ಕಿಣಿ ಪ್ರಾರ್ಥಿಸಿದರು. ಕೋಶಾಧಿಕಾರಿ ಡಾ. ತುಷಾರ್ ನಿರೂಪಿಸಿ ವಂದಿಸಿದರು.