ಮಂಗಳೂರು, ಡಿ.06 (DaijiworldNews/PY): ಕೇಂದ್ರ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು 2022ರ ಜನವರಿ 9ರಂದು ಮಂಗಳೂರಿಗೆ ಭೇಟಿ ನೀಡಲಿದ್ದು, ಈ ಸಂದರ್ಭ ಅವರು ವಿವಿಧ ಮಹತ್ವದಯೋಜನೆಗಳಿಗೆ ಶಿಲಾನ್ಯಾಸ ಮಾಡಲಿದ್ದಾರೆ.
ರಾಷ್ಟ್ರೀಯ ಹೆದ್ದಾರಿ-169 ಚತುಷ್ಪಥ ಬಿಕರ್ನಕಟ್ಟೆ-ಸಾಣೂರು ರಾಷ್ಟ್ರೀಯ ಹೆದ್ದಾರಿ ಹಾಗೂ ಎನ್ಹೆಚ್-75ರ ಷಟ್ಪಥ ಕಲ್ಲಡ್ಕ ಫ್ಲೈ ಓವರ್ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
"ರಾಷ್ಟ್ರೀಯ ಹೆದ್ದಾರಿ-75ರಲ್ಲಿ ಅಡ್ಡಹೊಳೆಯಿಂದ - ಪೆರಿಯಶಾಂತಿ ಹಾಗೂ ಪೆರಿಯಶಾಂತಿ - ಬಂಟ್ವಾಳ ಕ್ರಾಸ್ ನಡುವಿನ ಎರಡು ಪ್ಯಾಕೇಜ್ನ ಕಾಮಗಾರಿಗಳಿಗೂ ಸಹ ಪುನರ್ ಚಾಲನೆ ನೀಡಲಿದ್ದಾರೆ" ಎಂದು ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
"ಈ ಹಿಂದೆ ನವೆಂಬರ್ 16 ಕ್ಕೆ ಈ ಕಾರ್ಯಕ್ರಮವನ್ನು ನಿಗದಿಪಡಿಸಲಾಗಿತ್ತು, ಆದರೆ ಪರಿಷತ್ ಚುನಾವಣೆಗೆ ಸಂಬಂಧಿಸಿದ ನೀತಿ ಸಂಹಿತೆ ಜಾರಿಯಾದ ಕಾರಣ ಮುಂದೂಡಬೇಕಾಯಿತು" ಎಂದಿದ್ದಾರೆ.