ಉಳ್ಳಾಲ, ಡಿ.07 (DaijiworldNews/SM): ಇಲ್ಲಿನ ಠಾಣಾ ವ್ಯಾಪ್ತಿಯ ಬೀಚ್ ಬಳಿ ಮಾದಕ ವಸ್ತು ಸೇವಿಸುತ್ತಿದ್ದ ಯುವಕ ನೊಬ್ಬನನ್ನು ಗಸ್ತು ನಿರತ ಪೊಲೀಸರು ವಶಕ್ಕೆ ಪಡೆದ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ.
ಮೊಗವೀರ ಪಟ್ನ ನಿವಾಸಿ ಆಕಾಶ್ ಎಂ ಕಾಂಚಾನ್(24) ಎಂಬಾತ ಮಾದಕ ವಸ್ತು ಸೇವಿಸಿ ನಶೆಯ ಅಮಲಿನಲ್ಲಿ ತೂರಾಡಿಕೊಂಡು ಸಾರ್ವಜನಿಕರಿಗೆ ತೊಂದರೆ ನೀಡುತ್ತಿದ್ದ.
ಈ ವರ್ತನೆ ಗಮನಿಸಿದ ಗಸ್ತು ನಿರತ ಪೊಲೀಸರು ತನಿಖೆ ನಡೆಸಿ, ಬಳಿಕ ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ತಪಾಸಣೆ ನಡೆಸಿದಾಗ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಆಕಾಶ್ ವಿರುದ್ಧ ಪ್ರಕರಣ ದಾಖಲಿಸಿದ ಪೋಲೀಸರು ಆತನನ್ನು ಬಂಧಿಸಿದ್ದಾರೆ.