ಕಾಸರಗೋಡು, ಡಿ.08 (DaijiworldNews/PY): ರಾಷ್ಟ್ರೀಯ ಹೆದ್ದಾರಿಯ ಕುಂಬಳೆ ಪೆರುವಾಡ್ನಲ್ಲಿ ಮೂರು ಕಾರುಗಳ ನಡುವಿನ ಸರಣಿ ಅಪಘಾತದಲ್ಲಿ ಮೂವರು ಗಾಯಗೊಂಡ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.
ಮೊಗ್ರಾಲ್ ಪುತ್ತೂರಿನ ಜಗದೀಶ್ (30) ಬಾಲಕೃಷ್ಣ (50) ಮತ್ತು ಬದ್ರಿಯಾ ನಗರದ ಮುರ್ಷಿದ್ ( 22) ಗಾಯಗೊಂಡವರು.
ಕುಂಬಳೆ ಕಡೆಗೆ ತೆರಳುತ್ತಿದ್ದ ಆಲ್ಟೊ ಕಾರಿಗೆ ಎದುರಿನಿಂದ ಬರುತ್ತಿದ್ದ ಸ್ವಿಪ್ಟ್ ಕಾರು ಡಿಕ್ಕಿ ಹೊಡೆದಿದ್ದು, ಹಿಂದಿನಿಂದ ಬಂದ ವ್ಯಾಗನ್ ಕಾರು ಸ್ವಿಪ್ಟ್ ಕಾರಿಗೆ ಡಿಕ್ಕಿ ಹೊಡೆದು ಈ ಅಪಘಾತ ನಡೆದಿದೆ.
ಗಾಯಾಳುಗಳನ್ನು ಕುಂಬಳೆಯ ಆಸ್ಪತ್ರೆಗೆ ದಾಖಲಿಸಲಾಗಿದೆ.