ಬನ್ನಂಜೆ,ಡಿ 09 (DaijiworldNews/MS): ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ವಿಧಾನ ಪರಿಷತ್ ಚುನಾವಣೆಗೆ ಹಿನ್ನೆಲೆಯಲ್ಲಿ ಗುರುವಾರದಂದು ಉಡುಪಿ ಬನ್ನಂಜೆಯ ತಾಲೂಕು ಕಚೇರಿಯಲ್ಲಿ ತಹಶೀಲ್ದಾರರಾದ ಪ್ರದೀಪ್ ಕುರ್ಡೇಕರ್ ನೇತೃತ್ವದಲ್ಲಿ ಮಸ್ಟರಿಂಗ್ ಪ್ರಕ್ರಿಯೆ ನಡೆಯಿತು.
ಜಿಲ್ಲಾಧಿಕಾರಿಯವರಾದ ಕೂರ್ಮ ರಾವ್ ಮಸ್ಟರಿಂಗ್ ಕೇಂದ್ರಕ್ಕೆ ಆಗಮಿಸಿ, ಚಟುವಟಿಕೆಯನ್ನು ಪರಿಶೀಲಿಸಿದರು
ಜಿಲ್ಲೆಯಲ್ಲಿ ಡಿಸೆಂಬರ್ 10 ರಂದು ನಡೆಯುವ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ವಿಧಾನ ಪರಿಷತ್ ನ ದ್ವೆ-ವಾರ್ಷಿಕ ಚುನಾವಣೆಗೆ ಸಂAಧಿಸಿದAತೆ ಜಿಲ್ಲೆಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ , ಮತದಾನದ ದಿನದಂದು ಎಲ್ಲಾ ಮತಗಟ್ಟೆಗಳಲ್ಲಿ ವೀಡಿಯೋಗ್ರಫಿ ಮಾಡಲು ವ್ಯವಸ್ಥೆ ಮಡಿಕೊಳ್ಳಲಾಗಿದೆ. ಚುನಾವಣಾ ಕಣದಲ್ಲಿ ಒಟ್ಟು 3 ಮಂದಿ ಅಭ್ಯರ್ಥಿಗಳಿದ್ದು, ನೀತಿ ಸಂಹಿತೆಯ ಉಲ್ಲಂಘನೆಯಾದಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು, ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು
ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ವಿಧಾನ ಪರಿಷತ್ ಚುನಾವಣೆಗೆ ಜಿಲ್ಲೆಯಲ್ಲಿ 158 ಮತಗಟ್ಟೆಗಳನ್ನು ತೆರೆದಿದ್ದು, 158 ಚುನಾವಣಾಧಿಕಾರಿ, 158 ಸಹಾಯಕ ಚುನಾವಣಾಧಿಕಾರಿ, 158 ಮೈಕ್ರೋಅಬ್ಸರ್ವರ್, 158 ರೂಫ್ ಡಿ, 158 ರೂಟ್ ಅಧಿಕಾರಿಗಳು, 158 ಪೊಲೀಸ್ ಸಿಬ್ಬಂದಿಯನ್ನು ನೇಮಕ ಮಾಡಲಾಗಿದ್ದು, ಮತಗಟ್ಟೆ ಅಧಿಕಾರಿಗಳಿಗೆ ತರಬೇತಿಯನ್ನು ನೀಡಲಾಗಿದೆ. ಚುನಾವಣೆಯಲ್ಲಿ ಜಿಲ್ಲೆಯ ಗ್ರಾಮ ಪಂಚಾಯತ್ , ನಗರ ಸಭೆ, ಪಟ್ಟಣ ಪಂಚಾಯತ್ ಒಟ್ಟು ಸೇರಿ 2505 ಮತದಾರರು ಮತ ಚಲಾಯಿಸಲಿದ್ದಾರೆ .
ಡಿಸೆಂಬರ್ 10 ರಂದು ಬೆಳಗ್ಗೆ 8 ರಿಂದ ಮಧ್ಯಾಹ್ನ 4 ರ ವರೆಗೆ ಮತದಾನ ನಡೆಯಲಿದ್ದು, 130 ಸಾಮಾನ್ಯ, 26 ಸೂಕ್ಷ್ಮ , 2 ಅತೀ ಸೂಕ್ಷ್ಮ ಮತಗಟ್ಟೆಗಳಿವೆ. ಜಿಲ್ಲೆಯ 7 ತಾಲೂಕು ಕೇಂದ್ರಗಳಲ್ಲಿ ಮಸ್ಟರಿಂಗ್ ಪ್ರಕ್ರಿಯೆ ನಡೆಯಿತು .
ಎಲ್ಲಾ ಮತಗಟ್ಟೆಗಳನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದ್ದು, ಕೋವಿಡ್ ಮಾರ್ಗಸೂಚಿಗಳ ಪಾಲನೆಯೊಂದಿಗೆ, ಜಿಲ್ಲೆಯಲ್ಲಿ ಶಾಂತಿಯುತ ನಿಷ್ಪಕ್ಷಪಾತ ಚುನಾವಣೆ ನಡೆಯಲು ಎಲ್ಲ ರೀತಿ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.