ಕಾಸರಗೋಡು, ಡಿ.09 (DaijiworldNews/SM): ಕೆಂಗಲ್ಲು ಸಾಗಾಟದ ಮಿನಿಲಾರಿ ಪಲ್ಟಿಯಾಗಿ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಕಾಸರಗೋಡಿನ ಮುಂಡಿತ್ತಡ್ಕ-ಪಳ್ಳಂ ರಸ್ತೆಯ ಬೋಳ್ಕನಡ್ಕ ಎಂಬಲ್ಲಿ ಗುರುವಾರ ಸಂಜೆ ನಡೆದಿದೆ.
ಘಟನೆಯಲ್ಲಿ ಚಾಲಕ ಸೇರಿದಂತೆ ಇಬ್ಬರು ಅಪಾಯದಿಂದ ಪಾರಾಗಿದ್ದಾರೆ. ಜಾರ್ಖಂಡ್ ಮೂಲದ ಸುಧೀರ್(30) ಮೃತಪಟ್ಟವರು. ಅರ್ಜುನ್ ಮತ್ತು ಅಜಯ್ ಅಪಾಯದಿಂದ ಪಾರಾಗಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಡಿಕ್ಕಿ ಹೊಡೆದು ಬಳಿಕ ಹೊಂಡಕ್ಕೆ ಮಗುಚಿ ಬಿದ್ದಿದೆ. ಬದಿಯಡ್ಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.