ಉಡುಪಿ, ಡಿ 10(DaijiworldNews/MS): ಶ್ರೀರಾಮ ಸೇನೆಯ ಕಾರ್ಯಕರ್ತನೊಬ್ಬನಿಗೆ ಉಡುಪಿಯ ರಾಜಾಂಗಣಕ್ಕೆ ಕರೆಸಿಕೊಂಡ ದುಷ್ಕರ್ಮಿಗಳು ಏಕಾಏಕಿ ರಾಡ್ ನಿಂದ ಹಲ್ಲೆ ಮಾಡಿದ ಘಟನೆ ನಡೆದಿದೆ.
ವಾಹನದ ಇನ್ಸೂರೆನ್ಸ್ ನೆಪದಲ್ಲಿ ರಾಜಾಂಗಣಕ್ಕೆ ಬರುವಂತೆ ಹೇಳಿ ಆ ಬಳಿಕ ದಾಳಿ ನಡೆಸಲಾಗಿದೆ.
ಈ ಬಗ್ಗೆ ಮಾತನಾಡಿದ ರಾಮ್ ಸೇನಾ ಜಿಲ್ಲಾಧ್ಯಕ್ಷ ಜಯರಾಂ ಅಂಬೆಕಲ್ಲು ಮಾತನಾಡಿ ನಮ್ಮ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದ್ದು ಇಂತಹ ಕೃತ್ಯವನ್ನು ಯಾವುದೇ ಕಾರಣಕ್ಕೂ ನಾವು ಸಹಿಸಿಕೊಳ್ಳಲ್ಲ, ನಮ್ಮವರ ಮೇಲೆ ಹಲ್ಲೆ ಮಾಡಿದವರನ್ನು ಕೂಡಲೇ ಬಂದಿಸಬೇಕು. ಇಲ್ಲದಿದ್ದಲ್ಲಿ ಉಡುಪಿ, ದ. ಕ ಜಿಲ್ಲೆಯ ಶ್ರೀರಾಮ ಸೇನೆಯ ಕಾರ್ಯಕರ್ತರು ತೀವ್ರವಾದ ಹೋರಾಟವನ್ನು ಸಂಘಟನೆ ವತಿಯಿಂದ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.