ಬ್ರಹ್ಮಾವರ, ಡಿ 10(DaijiworldNews/MS): ರೈಲು ಡಿಕ್ಕಿ ಹೊಡೆದು ಚಿರತೆಯೊಂದು ಮೃತಪಟ್ಟ ಘಟನೆ ಡಿ.09ರ ತಡರಾತ್ರಿ ಬ್ರಹ್ಮಾವರ ತಾಲೂಕಿನ ನೀಲಾವರ ಸಮೀಪ ನಡೆದಿದೆ.
ರೈಲು ಡಿಕ್ಕಿ ಹೊಡೆದ ರಭಸಕ್ಕೆ ರೈಲ್ವೆ ಬ್ರಿಡ್ಜ್ ನಿಂದ ಚಿರತೆ ಗದ್ದೆಗೆ ಎಸೆಯಲ್ಪಟ್ಟಿದೆ. ಆಹಾರ ಅರಸಿಕೊಂಡು ಬೆಟ್ಟದಿಂದ ಚಿರತೆ ಗ್ರಾಮದತ್ತ ಬಂದಿರಬಹುದು ಎಂದು ಸ್ಥಳೀಯರು ಅಭಿಪ್ರಾಯ ಪಟ್ಟಿದ್ದಾರೆ.
ಕುಂದಾಪುರ ವಲಯ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿಕೊಟ್ಟು ಚಿರತೆಯ ಮೃತದೇಹವನ್ನು ಪರಿಶೀಲನೆ ಮಾಡಿದ್ದಾರೆ. ಮರಣೋತ್ತರ ಪರೀಕ್ಷೆಗಳನ್ನು ನಡೆಸಿ, ಅಂತ್ಯಸಂಸ್ಕಾರ ನಡೆಸುವುದಾಗಿ ಅರಣ್ಯಾಧಿಕಾರಿಗಳು ಮಾಹಿತಿ ನೀಡಿದ್ದಾರೆ.