ಉಡುಪಿ, ಡಿ.11 (DaijiworldNews/HR): ಅನ್ಯಧರ್ಮದ ಯುವಕ ಮತ್ತು ಯುವತಿ ಮಣಿಪಾಲ ಮಣ್ಣಪಳ್ಳದಲ್ಲಿ ವಿಹಾರಕ್ಕೆ ಬಂದಿದ್ದ ವೇಳೆ ಸಂಘಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ ನಡೆದಿದೆ.
ಮಣಿಪಾಲ ಪೊಲೀಸ್ ಠಾಣೆ
ಹಲ್ಲೆ ಮಾಡಿರುವವರನ್ನು ಪರ್ಕಳದ ಹೆರ್ಗದ ಪ್ರಾಣೇಶ್, ವಿನೂತ್ ಪೂಜಾರಿ ಮತ್ತು ಸಂಜಯ್ ಕುಮಾರ್ ಎಂದು ಗುರುತಿಸಲಾಗಿದೆ.
ಈ ಸಂಬಂಧ ಅಲ್ತಾಫ್ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಮೂವರನ್ನು ಪೊಲೀಸರು ಬಂಧಿಸಿದ್ದಾರೆ.