ಮಂಗಳೂರು, ಡಿ.11 (DaijiworldNews/HR): ನಗರದ ಹೊರವಲಯದ ಬೊಂದೇಲ್ನ ಕೃಷ್ಣಾನಗರದಲ್ಲಿ ಶನಿವಾರ ತಡೆಗೋಡೆ ಕುಸಿದು ಬಿದ್ದಿದ್ದು, ಮಣ್ಣಿನ ರಾಶಿಯಡಿ ಸಿಲುಕಿದ್ದ ಮಹಿಳೆ ಮತ್ತು ಮಗುವನ್ನು ರಕ್ಷಿಸಲಾಗಿದೆ.
ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದ್ದು, ಮಗು ಅಪಾಯದಿಂದ ಪಾರಾಗಿದೆ ಎಂದು ವರದಿಯಾಗಿದೆ.
ಮಂಗಳೂರು ಮಹಾನಗರ ಪಾಲಿಕೆ ಅಧಿಕಾರಿಗಳು ಕೃಷ್ಣಾನಗರದಲ್ಲಿ ಜಲಸಿರಿ ಯೋಜನೆಯಡಿ ಕಾಮಗಾರಿ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮಹಿಳೆ ಮತ್ತು ಮಗು ಉತ್ತರ ಕನ್ನಡ ಮೂಲದವರಾಗಿದ್ದಾರೆ.
ಅಗೆಯುವ ಯಂತ್ರದ ಸಹಾಯದಿಂದ ಇಬ್ಬರನ್ನು ರಕ್ಷಿಸಲಾಗಿದೆ.
ಮಹಿಳೆಯನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.