ಬೈಂದೂರು, ಡಿ.12 (DaijiworldNews/PY): ಇಲ್ಲಿನ ಶಿರೂರು ಸಂಕದಗುಂಡಿಯಲ್ಲಿ ಡಿ.10ರಂದು ಟ್ಯಾಂಕರ್ಗಳಿಂದ ಡೀಸೆಲ್ ಕಳವು ಮಾಡುತ್ತಿದ್ದ ಐವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಪುತ್ತೂರಿನ ಮಹಮ್ಮದ್ ಮುಸ್ತಾಫ್ (34), ಮಡಿಕೇರಿಯ ಮಾರ್ದಾಳ ನಿವಾಸಿ ಕಿರಣ್ (32), ಬಂಟ್ವಾಳ ತಾಲೂಕಿನ ಪುಂಜಾಲಕಟ್ಟೆಯ ಅಶೋಕ್ (30), ರೂಪೇಶ್ ಪೂಜಾರಿ (27) ಹಾಗೂ ಶಿರೂರು ಅಳ್ವೆಗದ್ದೆಯ ಮೋಹನ ಪೂಜಾರಿ (42) ಎಂದು ಗುರುತಿಸಲಾಗಿದೆ.
ಪ್ರತಿ ಲಾರಿಯ ಟ್ಯಾಂಕ್ನಿಂದ ಪೈಪ್ ಬಳಸಿ 15-20 ಲೀಟರ್ ಡೀಸೆಲ್ ಕಳವು ಮಾಡುತ್ತಿದ್ದ ಆರೋಪಿಗಳು ಡೀಸೆಲ್ ಅನ್ನು ಶಿರೂರಿನ ಮೋಹನ ಪೂಜಾರಿಗೆ ನೀಡುತ್ತಿದ್ದರು ಎಂದು ಪೊಲೀಸರು ತನಿಖೆಯಲ್ಲಿ ಕಂಡುಕೊಂಡಿದ್ಧಾರೆ.
ಡೀಸೆಲ್ ಸಾಗಾಟದ ಟ್ಯಾಂಕರ್ನಿಂದ ಡೀಸೆಲ್ ಕಳವು ಮಾಡುತ್ತಿದ್ದ ಕುರಿತು ಬಂದ ಖಚಿತ ಮಾಹಿತಿಯಂತೆ ಕುಂದಾಪುರ ಡಿವೈಎಸ್ಪಿ ಶ್ರೀಕಾಂತ್ ಕೆ ನೇತೃತ್ವದ ತಂಡ ದಾಳಿ ನಡೆಸಿದ್ದು, ಆರೋಪಿಗಳನ್ನು ಬಂಧಿಸಿದೆ.
ಒಟ್ಟು 4 ಕ್ಯಾನ್ಗಳಲ್ಲಿನ 6,500 ರೂ. ಮೌಲ್ಯದ ಸುಮಾರು 73 ಲೀಟರ್ ಡೀಸೆಲ್ ಅನ್ನು ಆರೋಪಿಗಳಿಂದ ವಶಪಡಿಸಿಕೊಳ್ಳಲಾಗಿದೆ.
ಈ ಕುರಿತು ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.