ಉಡುಪಿ, ಡಿ.12 (DaijiworldNews/HR): ಕಾಂಗ್ರೆಸ್ನವರು ವೋಟ್ ಬ್ಯಾಂಕಿಗಾಗಿ ಮತಾಂತರ ನಿಷೇಧ ಕಾಯ್ದೆ ವಿರೋಧಿಸುತ್ತಿದ್ದಾರೆ ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, "ನಾಳೆಯಿಂದ ಬೆಳಗಾವಿಯಲ್ಲಿ ಅಧಿವೇಶನ ಪ್ರಾರಂಭವಾಗುತ್ತಿದ್ದು, ಮತಾಂತರ ನಿಷೇಧ ಕಾನೂನು ಜಾರಿಗೆ ಬರಬೇಕು ಎಂಬ ನಿರೀಕ್ಷೆಯಲ್ಲಿದ್ದೇವೆ. ಈ ಕಾಯ್ದೆ ಜಾರಿಯಾದರೆ ಇದೊಂದು ಐತಿಹಾಸಿಕ ಅಧಿವೇಶನವಾಗಲಿದೆ" ಎಂದರು.
"ಮಂಗಳೂರು, ಉಡುಪಿ ಭಾಗದಲ್ಲಿ ನಡೆಯುತ್ತಿರುವ ಮತಾಂತರ ಪ್ರಕರಣವನ್ನು ನೋಡುತ್ತಿದ್ದು, ಶೀಘ್ರವಾಗಿ ಕಾಯ್ದೆ ಜಾರಿಯಾಗುವ ಅಗತ್ಯವಿದೆ. ಕಾಯ್ದೆ ಜಾರಿಯಾಗುತ್ತದೆ ಅನ್ನೋ ವಿಶ್ವಾಸವಿದೆ" ಎಂದಿದ್ದಾರೆ.
ಇನ್ನು ಕಾಂಗ್ರೆಸ್ನವರು ವೋಟ್ ಬ್ಯಾಂಕಿಗಾಗಿ ಮತಾಂತರ ನಿಷೇಧ ಕಾಯ್ದೆ ವಿರೋಧಿಸುತ್ತಿದ್ದಾರೆ. ಈ ಹಿಂದಿನಿಂದಲೂ ಅವರು ಇದನ್ನೇ ಮಾಡಿಕೊಂಡು ಬಂದಿದ್ದಾರೆ. ಗೋಹತ್ಯೆ ಕಾಯ್ದೆಗೂ ಕಾಂಗ್ರೆಸ್ ವಿರೋಧ ಮಾಡಿದೆ. ನಮಗೆ ಬಹುಮತ ಇದೆ ನಾವು ಕಾನೂನು ಮಾಡುತ್ತೇವೆ' ಎಂದು ಹೇಳಿದ್ದಾರೆ.