ಮಂಗಳೂರು, ಡಿ.14 (DaijiworldNews/PY): ದ.ಕ. ಹಾಗೂ ಉಡುಪಿ ಜಿಲ್ಲೆಯನ್ನೊಳಗೊಂಡ ಸ್ಥಳೀಯಾಡಳಿತದ ವಿಧಾನಪರಿಷತ್ನ ದ್ವಿಸದಸ್ಯತ್ವ ಸ್ಥಾನಕ್ಕೆ ಡಿ.10ರಂದು ನಡೆದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ.
ಮತ ಎಣಿಕಾ ಪ್ರಕ್ರಿಯೆಯ ಬಗ್ಗೆ ದ.ಕ ಜಿಲ್ಲಾಧಿಕಾರಿ ರಾಜೇಂದ್ರ ಕೆ. ವಿ ಅವರು ಮಾಧ್ಯಮದವರಿಗೆ ಮಾಹಿತಿ ನೀಡಿದ್ದು, "ಮತ ವಿಂಗಡಣೆ ಕಾರ್ಯ ಪೂರ್ಣಗೊಂಡಿದೆ. ಕೆಲವೇ ಕ್ಷಣಗಳಲ್ಲಿ ಮತ ಎಣಿಕೆ ಕಾರ್ಯ ಪ್ರಾರಂಭವಾಗಲಿದೆ. 14 ಟೇಬಲ್ಗಳಲ್ಲಿ ಮತ ಎಣಿಕೆ ನಡೆಯಲಿದೆ" ಎಂದಿದ್ಧಾರೆ.
"ಎಲ್ಲಾ ಬ್ಯಾಲೆಟ್ ಬಾಕ್ಸ್ಗಳನ್ನು ಎಲೆಕ್ಷನ್ ಏಜೆಂಟ್ಗಳ ಸಮ್ಮುಖದಲ್ಲಿ ಬೆಳಗ್ಗೆ 8 ಗಂಟೆಗೆ ಸ್ಟ್ರಾಂಗ್ ರೂಂ ಅನ್ನು ತೆರೆದು, ಎಲ್ಲಾ ಬ್ಯಾಲೆಟ್ ಬಾಕ್ಸ್ಗಳನ್ನು ತೆರೆದಿದ್ದೇವೆ. ಮತ ವಿಂಗಡಣೆ ಪೂರ್ಣಗೊಂಡಿದ್ದು, ಮತ ಎಣಿಕೆ ಆರಂಭಿಸಲಾಗಿದೆ ಎಂದು ತಿಳಿಸಿದ್ದಾರೆ." ಎಂದು ತಿಳಿಸಿದ್ದಾರೆ.
"ಒಟ್ಟು 14 ಟೇಬಲ್ಗಳಿದ್ದು, ಒಂದೊಂದು ಟೇಬಲ್ನಲ್ಲಿ ಅಂದಾಜಿನ ಪ್ರಕಾರ, ಈ ಟೇಬಲ್ ಒಳಗಡೆ 540 ಮತಗಳು ಬರುತ್ತವೆ. ಈಗ ಮತ ವಿಂಗಡಣೆ ಕಾರ್ಯ ಪೂರ್ಣಗೊಂಡಿದೆ" ಎಂದಿದ್ದಾರೆ.
ಈ ಸಂದರ್ಭ ಉಡುಪಿ ಜಿಲ್ಲಾಧಿಕಾರಿ ಎಂ ಕೂರ್ಮಾರಾವ್ ಹಾಗೂ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ ಕುಮಾರ್ ಇದ್ದರು.
ದ.ಕ.ಜಿಲ್ಲೆಯ 231 ಹಾಗೂ ಉಡುಪಿ ಜಿಲ್ಲೆಯ 158 ಸಹಿತ ಎರಡು ಜಿಲ್ಲೆಗಳ ಒಟ್ಟು 389 ಮತಗಟ್ಟೆಗಳಲ್ಲಿ ಒಟ್ಟ 6,040 ಮತದಾರರ ಪೈಕಿ 6,013 ಮಂದಿ ಮತದಾನ ಮಾಡಿದ್ದರು.