ಸುಳ್ಯ, ಡಿ 14 (DaijiworldNews/MS): ಬಸ್ ಸೌಲಭ್ಯ ಇಲ್ಲದಂತಹ ಸಂದರ್ಭದಲ್ಲಿ ಸುಳ್ಯದ ಗ್ರಾಮೀಣ ಭಾಗದಲ್ಲಿ ಬಸ್ ಸೌಲಭ್ಯ ಕಲ್ಪಿಸಿದ್ದ ಅವಿನಾಶ್ ಮೋಟರ್ಸ್ ಮಾಲಕ ನಾರಾಯಣ ರೈ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪತ್ನಿ ಮಕ್ಕಳು ವಿವಾಹ ಸಮಾರಂಭಕ್ಕಾಗಿ ಬೆಂಗಳೂರಿಗೆ ತೆರಳಿದ್ದು, ಡಿ.13 ರ ತಡರಾತ್ರಿ ಅರಂತೂರಿನ ತನ್ನ ಮನೆಯಲ್ಲಿ ಯಾರು ಇಲ್ಲದ ಸಂದರ್ಭ ಆತ್ಮಹತ್ಯೆಗೆ ಶರಣಾಗಿದ್ದಾರೆ.
ರಾತ್ರಿ 11.45 ರ ಸುಮಾರಿಗೆ ತನ್ನ ತಂಗಿಗೆ ವಾಟ್ಸಾಪ್ನಲ್ಲಿ ವಾಯ್ಸ್ ಮೆಸೇಜ್ ಕಳುಹಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತದೇಹದ ಪಕ್ಕದಲ್ಲಿ ಡೆತ್ನೋಟ್ ಪತ್ತೆಯಾಗಿದ್ದು, ಅನಾರೋಗ್ಯದ ಹಿನ್ನಲೆಯಲ್ಲಿ ತನಗೆ ಬದುಕಲು ಕಷ್ಟವಾಗುತ್ತಿದ್ದೂ ಯಾರಿಗೂ ತೊಂದರೆ ನೀಡಲು ಮನಸ್ಸಿಲ್ಲದೆ ನಿಮ್ಮನ್ನೆಲ್ಲಾ ಬಿಟ್ಟು ಹೋಗುತ್ತಿದ್ದೇನೆ ಎಂದು ಪತ್ರದಲ್ಲಿ ಬರೆದಿದ್ದಾರೆ ಎನ್ನಲಾಗಿದೆ. ತನ್ನ ಸಾವಿನ ಕಾರಣಕ್ಕೆ ಬಸ್ಗಳ ಓಡಾಟವನ್ನು ನಿಲ್ಲಿಸಬಾರದು. ಕಪ್ಪು ಫ್ಲ್ಯಾಗ್ ಹಾಕಿ ಬಸ್ ಓಡಿಸಬೇಕು ಉಲ್ಲೇಖಿಸಿದ್ದಾರೆಂದು ತಿಳಿದುಬಂದಿದೆ
ಮೃತ ನಾರಾಯಣ ರೈಗಳು ಪತ್ನಿ ವಿಜಯಾ ರೈ, ಪುತ್ರರಾದ ಅವಿನಾಶ್ ರೈ, ಅಭಿಲಾಷ್ ರೈಯವರನ್ನು ಅಗಲಿದ್ದಾರೆ