ಪುತ್ತೂರು, ಡಿ 15 (DaijiworldNews/MS): ಉಪ್ಪಿನಂಗಡಿ ಠಾಣೆಯ ಎದುರು ಮಂಗಳವಾರ ಸಂಜೆ ಪಿಎಫ್ ಐ ಕಾರ್ಯಕರ್ತರ ಪ್ರತಿಭಟನೆ ವೇಳೆ ಲಾಠಿ ಚಾರ್ಜ್ ನಡೆದು ಪೊಲೀಸರು ಮತ್ತು ಪ್ರತಿಭಟನಾಕಾರರು ಗಾಯಗೊಂಡ ಬೆನ್ನಲ್ಲೇ ಪುತ್ತೂರು ಉಪವಿಭಾಗೀಯ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ.
ಮುಂಜಾಗೃತಾ ಕ್ರಮವಾಗಿ ಪುತ್ತೂರು ಉಪವಿಭಾಗದಲ್ಲಿ ಸೆಕ್ಷನ್ 144 ರ ಅನ್ವಯ ಇಂದಿನಿಂದ ಡಿ.17 ರ ಮಧ್ಯರಾತ್ರಿಯವರೆಗೆ ನಿಷೇದಾಜ್ಞೆ ವಿಧಿಸಿ ಸಹಾಯಕ ಕಮಿಷನರ್ ಡಾ.ಯತೀಶ್ ಉಳ್ಳಾಲ್ ಆದೇಶ ಹೊರಡಿಸಿದ್ದಾರೆ.
ಉಪ್ಪಿನಂಗಡಿಯಲ್ಲಿ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿ ಪಿಎಫ್ಐ ಮುಖಂಡರನ್ನು ಪೊಲೀಸರು ವಿಚಾರಣೆಗೆ ಕರೆಸಿದ ಘಟನೆ ಮತ್ತು ಮುಖಂಡರನ್ನು ಬಿಡುಗಡೆಗೊಳಿಸಬೇಕೆಂದು ಪಿಎಫ್ಐ ಕಾರ್ಯಕರ್ತರು ಠಾಣೆಯ ಎದುರು ಪ್ರತಿಭಟನೆ ನಡೆಸಿದ, ಈ ಸಂದರ್ಭ ಘರ್ಷಣೆ ಉಂಟಾಗಿ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಪೊಲೀಸರು ಮತ್ತು ಸಂಘಟನೆಯ ಕಾರ್ಯಕರ್ತರು ಗಾಯಗೊಂಡಿದ್ದರು. ಇದರ ಹಿನ್ನಲೆಯಲ್ಲಿ ಇನ್ನಷ್ಟು ಪ್ರತಿಭಟನೆಗೆ ಕಾರಣವಾಗಬಹುದು ಎಂಬ ಹಿನ್ನಲೆಯಲ್ಲಿ ನಿಷೇದಾಜ್ಞೆ ವಿಧಿಸಲಾಗಿದೆ