ಉಡುಪಿ, ಡಿ.15 (DaijiworldNews/SM): ರಾಜ್ಯದಲ್ಲಿ ಮತಾಂತರ ಕಾನೂನು ಜಾರಿ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ ಎಲ್ ಸಂತೋಷ್ ಪ್ರತಿಕ್ರಿಯೆ ನೀಡಿದ್ದು, ಮತಾಂತರದ ವಿಚಾರದಲ್ಲಿ ಸಮಾಜ ಜಾಗೃತವಾಗಬೇಕಿದೆ ಎಂದಿದ್ದಾರೆ.
ಈ ಬಗ್ಗೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಮುಖ್ಯಮಂತ್ರಿ ಗಳು ಹೇಳಿದ್ದಾರೆ. ಈ ಕಾರಣದಿಂದಾಗಿ ಕಾಯ್ದೆ ಜಾರಿಯಾಗುತ್ತದೆ. ಸರ್ಕಾರ ಕಾನೂನು ಜಾರಿ ಮಾಡುತ್ತದೆ ನಿಜ. ಆದರೆ ಯಾವತ್ತೂ ಕಾನೂನು ಮಾತ್ರ ಪರಿಹಾರವಾಗಿಲ್ಲ. ಈ ಹಿನ್ನೆಲೆಯಲ್ಲಿ ಸಮಾಜ ಜಾಗರೂಕವಾಗಿರಬೇಕು. ಆಗ ಮಾತ್ರ ಕಾನೂನು ಪ್ರಯೋಜನವಾಗಲಿದೆ ಎಂದಿದ್ದಾರೆ.
ಲವ್ ಜಿಹಾದ್ ಗೆ ನಮ್ಮ ಹೆಣ್ಣು ಮಕ್ಕಳು ಬಲಿಯಾಗುತ್ತಿದ್ದಾರೆ. ಮನೆ ಮತ್ತು ಸಮಾಜ ಮಕ್ಕಳನ್ನು ಸರಿಯಾಗಿ ಬೆಳಸದ ಪರಿಣಾಮ ಇಂತಹ ಘಟನೆಗಳು ನಡೆಯುತ್ತಿವೆ. ನಮ್ಮ ಸುತ್ತಮುತ್ತ ವ್ಯವಸ್ಥೆಯಲ್ಲಿನ ಭಯೋತ್ಪಾಧನೆ ಗುರುತಿಸಬೇಕು. ರಾಮ -ಕೃಷ್ಣರ ಹೆಸರು ಹೇಳಿಕೊಂಡು ಬದುಕಲು ಸಾಧ್ಯವಿಲ್ಲ. ಈಗ ನಡೆಸ ಬೇಕಾದ ಕರ್ಮ ನಡೆಸಲೇ ಬೇಕು. ಒಗ್ಗಟ್ಟು ಪ್ರದರ್ಶನ ಮಾಡಬೇಕು. ಜಾತಿ, ಊರು ,ಧರ್ಮದ ಹೆಸರಲ್ಲಿ ಒಗ್ಗಟ್ಟು ಬೇಕು. ಪ್ರೇಮಕ್ಕೂ, ಪ್ರೀತಿಗೂ ಲವ್ ಜಿಹಾದ್ ಗೂ ಸಂಬಂಧವೇ ಇಲ್ಲ ಎಂದಿದ್ದಾರೆ.