ಮಂಗಳೂರು, ಡಿ16 (DaijiworldNews/MS): ವಾಮಂಜೂರು ಸಮೀಪದ ತಿರುವೈಲಿನಲ್ಲಿ ಕಾಲೇಜು ವಿದ್ಯಾರ್ಥಿನಿಗೆ ನಾಲ್ವರು ಯುವಕರು ಕಿರುಕುಳ ಘಟನೆಗೆ ಸಂಬಂಧಿಸಿ ನಾಲ್ಕು ಮಂದಿಯ ವಿರುದ್ದ ಪಾಂಡೇಶ್ವರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಗೆ ಮೂಡುಶೆಡ್ಡೆ - ವಾಮಂಜೂರು ನಿವಾಸಿ ಚರಣ್ ಹಾಗೂ ಆತನ ಮೂವರು ಸ್ನೇಹಿತರು ಡಿ.2 ರಿಂದ 9 ರವರೆಗೆ ನಿರಂತರ ಕಿರುಕುಳ ನೀಡಿದ್ದರು ಎಂದು ದೂರಲಾಗಿದೆ.
ವಿದ್ಯಾರ್ಥಿನಿಯ ಮೊಬೈಲ್ ಕಿತ್ತುಕೊಂಡು, ಅದರಲ್ಲಿರೋ ಮೆಮೊರಿ ಕಾರ್ಡ್ ತೆಗೆದಿದ್ದಲ್ಲದೇ ಆಗಾಗ ಮೆಸೇಜ್ ಹಾಗೂ ಕರೆಮಾಡಿ ಕಿರುಕುಳ ನೀಡುತ್ತಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಳು. ಅಲ್ಲದೆ ಈ ಬಗ್ಗೆ ಯಾರಿಗೂ ತಿಳಿಸಬಾರದು ಎಂದು ಬೆದರಿಸಿದ್ದಾರೆ ಎಂದು ವಿದ್ಯಾರ್ಥಿನಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.