ಕಾಪು, ಡಿ16 (DaijiworldNews/MS): ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದು ಬಳಿಕ ಹೊಡೆದಾಟದ ಮಟ್ಟಕ್ಕೆ ತಲುಪಿದ ಘಟನೆ ಡಿ. 16 ರ ಮಧ್ಯಾಹ್ನ ನಡೆದಿದೆ.
ವಿದ್ಯಾರ್ಥಿನಿಯೊಂದಿಗೆ ಅನ್ಯಕೋಮಿನ ಯುವಕ ಮಾತನಾಡಿದ ಎನ್ನುವ ಕ್ಲುಲಕ ವಿಚಾರ ಈ ಘಟನೆಗೆ ಕಾರಣವಾಗಿದ್ದು, ಬಳಿಕ ಮಾತಿಗೆ ಮಾತು ಬೆಳೆದು ಹೊಡೆದಾಟ ಹಂತ ತಲುಪುತ್ತಿದ್ದಂತೆ ಪ್ರಾಶುಂಪಾಲರು ಕಾಪು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಆಗಮಿಸಿದ ಕಾಪು ಎಸ್ ಐ ರಾಘವೇಂದ್ರ ಸಿ, ಮತ್ತು ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ , ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದು, ವಿದ್ಯಾರ್ಥಿಗಳಿಗೆ ಬುದ್ದಿಮಾತು ಹೇಳಿ ಎಚ್ಚರಿಕೆ ನೀಡಿದ್ದಾರೆ.