ಮೂಡುಬಿದಿರೆ,ಡಿ 18 (DaijiworldNews/MS): ಇಲ್ಲಿನ ಪುತ್ತಿಗೆ ಗ್ರಾಮದ ನೆಲ್ಲಿಗುಡ್ಡೆ ಅಯ್ಯಪ್ಪ ಮಂದಿರ ಬಳಿಯ ನಿವಾಸಿ ಎಲೆಕ್ಟ್ರಿಷಿಯನ್ ಡಿ.18 ರ ಶನಿವಾರ ಬೆಳಗ್ಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಅವಿವಾಹಿತರಾಗಿದ್ದ ಶಿವಾನಂದ(37) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ – 9152987821