ಮಂಗಳೂರು, ಡಿ.18 (DaijiworldNews/HR): ಕೊರೊನಾದಿಂದ ಮೃತಪಟ್ಟ ಕಾರ್ಕಳ ಹೆಬ್ರಿ ತಾಲೂಕುಗಳ 38 ಮಂದಿ ಬಿಪಿಎಲ್ ಪಡಿತರ ಹಿನ್ನಲೆಯ 38 ಮೃತ ವ್ಯಕ್ತಿಗಳ ವಾರಸುದಾರರಿಗೆ ತಲಾ 1 ಲಕ್ಷ ರೂ. ಪರಿಹಾರ ಚೆಕ್ ಅನ್ನು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ.ಸುನಿಲ್ ಕುಮಾರ್ ಇಂದು ಕಾರ್ಕಳದಲ್ಲಿ ವಿತರಿಸಿದರು.
ತಹಶೀಲ್ದಾರ್ ಪುರಂದರ.ಕೆ ಪ್ರಾಸ್ತಾವಿಕ ಮಾತುಗಳನ್ನಾಡಿದ್ದು, ತಾ.ಪಂ ಕಾರ್ಯನಿರ್ವಾಹಣಾಧಿಕಾರಿ ಗುರುದತ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಇನ್ನು ರವಿಚಂದ್ರ ಕಾರ್ಯಕ್ರಮ ನಿರ್ವಹಿಸಿದ್ದು, ಚೆಕ್ ಸ್ವೀಕೃತರು, ಅಧಿಕಾರಿಗಳು ಉಪಸ್ಥಿತರಿದ್ದರು.