ಧರ್ಮಸ್ಥಳ, ಡಿ.20 (DaijiworldNews/PY): "ದಕ್ಷಿಣ ಕನ್ನಡ ಪತ್ರಕರ್ತರ ಸಮ್ಮೇಳನ ಮಾದರಿ ಯಶಸ್ವಿ ಸಮ್ಮೇಳನವಾಗಿ ಮೂಡಿಬರಲಿ" ಎಂದು ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ತಿಳಿಸಿದ್ದಾರೆ.
ಮಂಗಳೂರಿನ ಕುದ್ಮುಲ್ ರಂಗ ರಾವ್ ಸಭಾಂಗಣದಲ್ಲಿ ಡಿ.28 ರಂದು ನಡೆಯಲಿರು ವ ದಕ್ಷಿಣ ಕನ್ನಡ ಕಾರ್ಯ ನಿರತ ಸಂಘದ ಜಿಲ್ಲಾ ಸಮಾವೇಶ ದ ಲಾಂಛನವನ್ನು ಸೋಮವಾರ ಧರ್ಮಸ್ಥಳ ಕ್ಷೇತ್ರದಲ್ಲಿಂದು ಬಿಡುಗಡೆಗೊಳಿಸಿ ಮಾತನಾಡಿದರು.
"ದ.ಕ ಜಿಲ್ಲಾ ಕಾರ್ಯ ನಿರತ ಷತ್ರಕರ್ತರ ಸಂಘ ಕ್ರೀಯಾಶೀಲ ಚಟುವಟಿಕೆಗಳಲ್ಲಿ ತೊಡಗಿರುವುದನ್ನು ಗಮನಿಸಿದ್ದೇನೆ. ಕಳೆದ ಬಾರಿ ಮಾದರಿಯಾದ ರಾಜ್ಯ ಸಮ್ಮೇಳನ ದಲ್ಲಿ ಪತ್ರಕರ್ತರು ಉತ್ಸಾಹದಿಂದ ಭಾಗವಹಿಸಿರುವುದನ್ನು ಗಮನಿಸಿದ್ದೇನೆ. ಈ ಬಾರಿಯೂ ಸಮ್ಮೇಳನ ಯಶಸ್ವಿಯಾಗಲಿ" ಎಂದು ಅವರು ಹಾರೈಸಿದರು.
ಈ ಸಂದರ್ಭದಲ್ಲಿ ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀ ನಿವಾಸ ನಾಯಕ್ ಇಂದಾಜೆ, ಸಂಘದ ಪದಾಧಿಕಾರಿಗಳಾದ ಇಬ್ರಾಹಿಂ ಅಡ್ಕಸ್ಥಳ, ಪುಷ್ಪರಾಜ್ ಬಿ.ಎನ್, ಭಾಸ್ಕರ್ ರೈ ಕಟ್ಟ, ರಾಜೇಶ್ ದಡ್ಡಂಗಡಿ, ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳಾದ ಮನೋಹರ ಬಳಂಜ, ಎನ್.ಆರ್.ಪೂವಣಿ ಉಪಸ್ಥಿತರಿದ್ದರು.
ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ಶಾಸಕ ಹರೀಶ್ ಪೂಂಜ ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಹಿತಿ ಪತ್ರವನ್ನು ಇಂದು ಬೆಳ್ತಂಗಡಿಯಲ್ಲಿ ಬಿಡುಗಡೆಗೊಳಿಸಿ ಶುಭಹಾರೈಸಿದರು.
ಈ ಸಂದರ್ಭ ದ.ಕ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಅಚ್ಚುಶ್ರೀ ಬಂಗೇರ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.