ಸುಳ್ಯ, ಡಿ 23 (DaijiworldNews/MS): ಸುಳ್ಯದಿಂದ ಆಟೋರಿಕ್ಷಾವನ್ನು ಬಾಡಿಗೆಗೆಂದು ಕೊಂಡೊಯ್ದು ನಂತರ ಚಾಲಕನಿಗೆ ಥಳಿಸಿ, ಆಟೋರಿಕ್ಷಾದೊಂದಿಗೆ ಕೊಂಡೊಯ್ಯುತ್ತಿದ್ದಾಗ ಆರೋಪಿಗಳನ್ನು ಕೇರಳ ಪೊಲೀಸರು ಬಂಧಿಸಿದ್ದಾರೆ.
ಆಟೋ ಚಾಲಕ ಹುಸೈನ್ ಹಲ್ಲೆಗೊಳಗಾದವರು ಎಂದು ತಿಳಿದುಬಂದಿದೆ.
ಅಜ್ಜಾವರದಿಂದ ಆಟೋರಿಕ್ಷಾವನ್ನು ಮಂಡೆಕೋಲಿಗೆ ಬಾಡಿಗೆಗೆಂದು ಇಬ್ಬರು ಕರೆದುಕೊಂಡು ಹೋಗಿದ್ದು, ಆಟೋ ಅಡ್ಪಂಗಾಯ ಬಳಿ ತಲುಪುತ್ತಿದ್ದಂತೆ ಆಟೋದಲ್ಲಿದ್ದವರು ಏಕಾಏಕಿ ಆಟೋ ಚಾಲಕ ಹುಸೈನ್ ಮೇಲೆ ಹಲ್ಲೆ ನಡೆಸಿ, ಹುಸೈನ್ ಅವರ ಬಳಿಯಿದ್ದ ಮೊಬೈಲ್ ಮತ್ತು ನಗದು ಕಿತ್ತುಕೊಂಡು ಆಟೋ ಸಮೇತ ಕೇರಳದ ಕಡೆಗೆ ಪರಾರಿಯಾಗಿದ್ದರು.
ಈ ಬಗ್ಗೆ ಸ್ಥಳೀಯರು ಆದೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಆದೂರು ಪೊಲೀಸರು ದೇವರಡ್ಕ ಪುದಿಯಂಬಲಂ ಎಂಬಲ್ಲಿ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ .