ಮಂಗಳೂರು, ಡಿ.22 (DaijiworldNews/SM): ಸ್ಯಾಂಡಲ್ ವುಡ್ ನಟಿ ಡಿಂಪಲ್ ಕ್ವೀನ್ ರಚಿತಾ ರಾಮ್ ಮಂಗಳೂರಿನ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ರಚಿತ ರಾಮ್ ವಿಶೇಷ ಪೂಜೆ ಸಲ್ಲಿಸಿದರು. ಅರ್ಚಕರು ಪ್ರಾರ್ಥನೆ ಸಲ್ಲಿಸಿ ಪ್ರಸಾದ ನೀಡಿ ದೇವಳದ ವತಿಯಿಂದ ವಿಶೇಷವಾಗಿ ಗೌರವಿಸಲಾಯಿತು. ದೇವಸ್ಥಾನದಲ್ಲಿ ರಚಿತಾ ರಾಮ್ ಕಂಡು ಅಭಿಮಾನಿಗಳು ಸೆಲ್ಫಿ ತೆಗೆಸಿಕೊಂಡರು. ಇದೇ ಸಂದರ್ಭ ಮಾತನಾಡಿದ ರಚಿತಾ ರಾಮ್ ಕರಾವಳಿಯ ದೇವಸ್ಥಾನಗಳು ಭಕ್ತಿಯ ತಾಣಗಳಾಗಿದ್ದು ಎಲ್ಲರಿಗೂ ಹೊಸವರ್ಷದ ಶುಭಾಶಯಗಳೊಂದಿಗೆ ದೇವರು ಆಯುರಾರೋಗ್ಯ ಐಶ್ವರ್ಯ ನೀಡಲಿ ಎಂದರು. ಪ್ರತಿ ವರ್ಷ ಬಪ್ಪನಾಡು ಕ್ಷೇತ್ರಕ್ಕೆ ಬರುತ್ತೇನೆ ಈ ಬಾರಿಯೂ ಬಂದಿದ್ದೇನೆ ಎಂದರು. ನನಗೆ ಮಂಗಳೂರಿನ ಪಬ್ಬಾಸ್ ಐಸ್ ಕ್ರೀಂ ಹಾಗೂ ಕರಾವಳಿ ಶೈಲಿಯ ವಿಶೇಷ ಖಾದ್ಯಗಳು ಹಾಗೂ ಊಟ ಬಲು ಇಷ್ಟ ಎಂದರು.