ಉಡುಪಿ, ಡಿ. 24 (DaijiworldNews/HR): ಜಿಲ್ಲೆಯಾದ್ಯಂತ ಕ್ರಿಸ್ತ ಜನನದ ಹಬ್ಬವಾದ ಕ್ರಿಸ್ಮಸ್ ಅನ್ನು ಕ್ರೈಸ್ತ ಬಾಂಧವರು ಭಕ್ತಿ ಭಾವದಿಂದ ಆಚರಿಸಿದರು. ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ್ಯಾರಾದ ಅತಿ ವಂದನೀಯ ಡಾಕ್ಟರ್ ಜೆರಾಲ್ಡ್ ಐಸಾಕ್ ಲೋಬೋ ಮಿಲಾಗ್ರಿಸ್ ಕೆಥೆಡ್ರಲ್ ನಲ್ಲಿ ಪವಿತ್ರ ಬಲಿಪೂಜೆಯನ್ನು ಅರ್ಪಿಸಿದರು. ಉಡುಪಿ ಜಿಲ್ಲೆಯ ಎಲ್ಲಾ ಚರ್ಚ್ ಗಳಲ್ಲಿ ಹಬ್ಬದ ಪ್ರಯುಕ್ರ ವಿಶೇಷ ಬಲಿಪೂಜೆಗಳು ಜರಗಿದವು.
ಕ್ರಿಸ್ಮಸ್ ನ ವಿಶೇಷ ಸಂಧರ್ಭದಲ್ಲಿ ಚರ್ಚ್ ಗಳನ್ಮು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಕೋವಿಡ್ ನಿಯಮಾವಳಿಗಳನ್ನು ಪಾಲಿಸಿ ನಡೆದ ಬಲಿಪೂಜೆಗಳಲ್ಲಿ ನೂರಾರು ಮಂದಿ ಭಕ್ತಾಧಿಗಳು ಭಕ್ತಿ ಭಾವದಿಂದ ಭಾಗವಹಿಸಿದರು.
ಬಲಿ ಪೂಜೆಯ ಬಳಿಕ ಕ್ರೈಸ್ತ ಬಾಂದವರು ಪರಸ್ಪರ ಶುಭಾಶಯಗಳನ್ನು ವಿನಿಮಯ ಮಾಡಿಕೊಂಡರು.