ಬಂಟ್ವಾಳ, ಡಿ. 26 (DaijiwoldNews/HR): ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನಕ್ಕೆ ಸಮರ್ಪಣೆಗೊಳ್ಳಲಿರುವ ಧ್ವಜಸ್ತಂಭ(ಕೊಡಿಮರ)ವನ್ನು ಬಿ.ಸಿ.ರೋಡಿನ ಬಸ್ತಿಪಡ್ಪು ಮೈದಾನದಿಂದ ಮೆರವಣಿಗೆಯ ಮೂಲಕ ಸರಪಾಡಿ ಕ್ಷೇತ್ರಕ್ಕೆ ಕೊಂಡೊಯ್ಯಲಾಯಿತು.
ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿಯವರು ಮೆರವಣಿಗೆಗೆ ಚಾಲನೆ ನೀಡಿ, ಸೂರ್ಯ-ಚಂದ್ರ ಇರುವವರೆಗೂ ಕೊಡಿಮರದ ಶಕ್ತಿ ಶಾಶ್ವತವಾಗಿ ಇರುತ್ತದೆ ಎಂಬ ನಂಬಿಕೆ ಇದ್ದು, ಅದರಿಂದ ದೇವಸ್ಥಾನದಲ್ಲಿ ದೇವರ ಶಕ್ತಿ ಸ್ಥಿರವಾಗಿ ನಿಲ್ಲುತ್ತದೆ. ನಾವು ಕೊಡಿಮರಕ್ಕೆ ಪೂಜ್ಯನೀಯ ಸ್ಥಾನವನ್ನು ನೀಡಿದ್ದು, 2023ರ ಮೊದಲು ಸರಪಾಡಿ ಕ್ಷೇತ್ರದ ಬ್ರಹ್ಮಕಲಶಕ್ಕೆ ಎಲ್ಲರ ಶಕ್ತಿ ಮೀರಿದ ಪ್ರಯತ್ನ ಅಗತ್ಯ ಎಂದರು.
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಮಾತನಾಡಿ, ಕ್ಷೇತ್ರದ ಜೀರ್ಣೋದ್ಧಾರ ಕಾರ್ಯಗಳು ನಡೆಯುತ್ತಿದ್ದು, ಅದರ ಭಾಗವಾಗಿ ಕೊಡಿಮರ ಸಮರ್ಪಿಸಲಾಗುತ್ತಿದೆ ಮುಂದೆ ಶೀಘ್ರದಲ್ಲಿ ಬ್ರಹ್ಮಕಲಶಾಭಿಷೇಕ ನೆರವೇರಲಿ ಎಂದರು. ಕೊಡಿಮರದ ಮೆರವಣಿಗೆಗೆ ಲಾರಿಯನ್ನು ಒದಗಿಸಿದ ಮಾಜಿ ಸಚಿವ ಬಿ.ನಾಗರಾಜ ಶೆಟ್ಟಿ, ಭವಾನಿ ಶಿಪ್ಪಿಂಗ್ಸ್ ಮಾಲಕ ಕುಸುಮೋಧರ ಡಿ.ಶೆಟ್ಟಿ ಶುಭಹಾರೈಸಿದರು.
ಬಿಜೆಪಿ ರಾಜ್ಯಾಧ್ಯಕ್ಷ, ಸಂಸದ ನಳಿನ್ಕುಮಾರ್ ಕಟೀಲು, ಮಾಜಿ ಸಚಿವ ಬಿ.ರಮಾನಾಥ ರೈ, ಜೀರ್ಣೋದ್ಧಾರ ಸಮಿತಿ ಸಂಚಾಲಕ ಡಾ. ಎಂ.ಮೋಹನ್ ಆಳ್ವ, ಬಂಟ್ವಾಳ ಬಿಜೆಪಿ ದೇವಪ್ಪ ಪೂಜಾರಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಯಾನಂದ ಪಿ, ಉದ್ಯಮಿ ಸಂಜೀವ ಪೂಜಾರಿ, ಜಿ.ಪಂ.ಮಾಜಿ ಸದಸ್ಯ ಪದ್ಮಶೇಖರ್ ಜೈನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್, ವಿವಿಧ ಕ್ಷೇತ್ರಗಳ ಪ್ರಮುಖರಾದ ಡಾ. ಸತ್ಯಶಂಕರ್ ಶೆಟ್ಟಿ, ಡಾ. ಶಿವಪ್ರಸಾದ್ ಶೆಟ್ಟಿ, ಚಂದ್ರಹಾಸ ಶೆಟ್ಟಿ, ಚಂದ್ರಶೇಖರ ಶೆಟ್ಟಿ, ದಯಾನಂದ ಶೆಟ್ಟಿ ಅಮೈ, ರಾಧಾಕೃಷ್ಣ ಮಯ್ಯ, ಮೋಹನದಾಸ ಶೆಟ್ಟಿ, ಪ್ರವೀಣ್ ಕಿಣಿ, ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಎಂ.ಎಸ್.ಶೆಟ್ಟಿ ಸರಪಾಡಿ, ಕಾರ್ಯಾಧ್ಯಕ್ಷ ಜಗನ್ನಾಥ ಚೌಟ, ಆಡಳಿತ ಸಮಿತಿ ಅಧ್ಯಕ್ಷ ವಿಠಲ ಎಂ.ಆರುಮುಡಿ, ಬಾಚಕೆರೆ ಕ್ಷೇತ್ರದ ಧರ್ಮದರ್ಶಿ ದೇಜಪ್ಪ ಬಾಚಕೆರೆ, ರತ್ನಾಕರ ಭಟ್ ಸರಪಾಡಿ, ರತ್ನಾಕರ ಶೆಟ್ಟಿ, ಮಹಾಬಲ ಆಳ್ವ ಕಮ್ಮಾಜೆ, ಪ್ರಕಾಶ್ ಶೆಟ್ಟಿ ತುಂಬೆ, ರಾಮಾನಾಥ ಕಾರಂದೂರು, ಆಡಳಿತ ಸಮಿತಿ ಸದಸ್ಯರು, ವಿವಿಧ ದೇವಸ್ಥಾನಗಳ ಪ್ರಮುಖರು, ಸಂಘ ಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.