ಕಡಬ,ಡಿ 27 (DaijiworldNews/MS): ಚಿರತೆ ಮರಿಯನ್ನು ಹೋಲುವ ಪ್ರಾಣಿಯೊಂದು ವಾಹನದ ಅಡಿಗೆ ಬಿದ್ದು ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ - ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ ಹಳೇಸ್ಟೇಷನ್ ಎಂಬಲ್ಲಿ ಡಿ.27 ಸೋಮವಾರ ಬೆಳಗ್ಗೆ ನಡೆದಿದೆ.
ಚಿರತೆಯನ್ನು ಹೋಲುವ ಈ ಪ್ರಾಣಿಯು ಅಪರಿಚಿತ ವಾಹನದ ಅಡಿಗೆ ಬಿದ್ದಿದ್ದು, ರಸ್ತೆಯಲ್ಲೇ ಸಾವನ್ನಪ್ಪಿದೆ. ಇದನ್ನು ಕಂಡ ಸ್ಥಳೀಯರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.