ಮಂಗಳೂರು, ಡಿ. 31 (DaijiworldNews/HR): ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಶಿಲಾಮಯ ಸುತ್ತು ಪೌಳಿಯ ಜೀರ್ಣೋದ್ದಾರ ಕಾಮಗಾರಿಗೆ ವಿಶೇಷ ಅನುದಾನ ಕೋರಿ ಮನವಿಯನ್ನು ಸಂಸದ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ರವರ ಶಿಫಾರಿಸಿನ ಮೇಲೆ ಮಂಗಳೂರು ದಕ್ಷಿಣ ವಿಭಾಗ ಕ್ಷೇತ್ರದ ಶಾಸಕರಾದ ಡಿ ವೇದವ್ಯಾಸ್ ಕಾಮತ್ ನೇತ್ರತ್ವದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕ್ಷೇತ್ರದ ಮೊಕ್ತೇಸರ್ ಕೆ ಕೇಶವ ಆಚಾರ್ಯರು ಡಿಸೆಂಬರ್ 31 ರಂದು ಬೆಂಗಳೂರಿನಲ್ಲಿ ವಿಧಾನ ಸೌಧದಲ್ಲಿ ನೀಡಿದರು.
ಜನವರಿ 17 ರಿಂದ 26ನೇ ತನಕ ನಡೆಯುವ ಬ್ರಹ್ಮಕಲಶೋತ್ಸವಕ್ಕೆ ಮತ್ತು ಧಾರ್ಮಿಕ ಸಭೆಗೆ ಮುಖ್ಯ ಮಂತ್ರಿಯವರಿಗೆ ಆಹ್ವಾನ ಪತ್ರಿಕೆ ನೀಡಿ ಆಹ್ವಾನಿಸಲಾಯಿತು. ಕ್ಷೇತ್ರದ ಮನವಿ ಪರಿಶೀಲಿಸಿ ವಿಶೇಶ ಅನುದಾನವನ್ನು ಶೀಘ್ರದಲ್ಲಿ ನೀಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕ್ಷೇತ್ರದ ಮೂರನೇ ಮೊಕ್ತೇಸರ ಎ ಲೋಕೇಶ್ ಆಚಾರ್ಯ, ಆಡಳಿತ ಮಂಡಳಿಯ ಸದಸ್ಯ ಟಿ ಜಯಕರ ಆಚಾರ್ಯ ತಲೆಬೈಲ್, ಜೀರ್ಣೋದ್ದಾರ ಸಮಿತಿಯ ಕಾರ್ಯದರ್ಶಿ ಸುಜೀರ್ ವಿನೋದ್ ಆಡಳಿತ ಮಂಡಳಿಯ ವಿಶೇಷ ಆಹ್ವಾನಿತ ಶಾಮ ಡಿ ಆಚಾರ್, ಬಿಜೆಪಿ ಯ ಸಕ್ರಿಯ ಕಾರ್ಯಕರ್ತ ಬಿ ಮೋಹನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.