ಕಾಸರಗೋಡು, ಜ 26 (DaijiworldNews/HR): ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ಸಂದರ್ಭದಲ್ಲಿ ಅಗೌರವ ತೋರಲಾಗಿದೆ ಎಂದು ರಾಜ್ಯ ಬಂದರು ಸಚಿವ ಆಹಮ್ಮದ್ ದೇವರ್ ಕೊವಿಲ್ ವಿರುದ್ದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಕಾಸರಗೋಡು ಸರಕಾರಿ ಅತಿಥಿ ಗೃಹ ಪರಿಸರದಲ್ಲಿ ಕಪ್ಪು ಬಾವುಟ ಪ್ರದರ್ಶಿಸಿದರು.
ಯುವ ಮೋರ್ಚಾ ಜಿಲ್ಲಾಧ್ಯಕ್ಷ ಧನಂಜಯ ಮಧೂರು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಪ್ರತಿಭಟನಾಕಾರರನ್ನು ಪೊಲೀಸರು ಹರಸಾಹಸ ಪಟ್ಟು, ನಿಯಂತ್ರಿಸಿದರು. ಬಳಿಕ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು.
ಮುನ್ಸೂಚನೆ ಇಲ್ಲದೆ ಮಹಿಳಾ ಕಾರ್ಯಕರ್ತರು ಸೇರಿದಂತೆ ಹತ್ತಕ್ಕೂ ಅಧಿಕ ಮಂದಿ ಅತಿಥಿ ಗೃಹ ಪರಿಸರದಲ್ಲಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶನ ನಡೆಸಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ನಿಯಂತ್ರಿ ಸಲು ಹರಸಾಹಸ ಪಟ್ಟರು.
ಇನ್ನು ಕಾರ್ಯಕರ್ತರಾದ ಅಂಜು, ಕೀರ್ತನ್ ಜೆ, ಅಜಿತ್ ಕುಮಾರ್ ಮೊದಲಾದವರು ನೇತೃತ್ವ ನೀಡಿದರು.