ಕಾರ್ಕಳ, ಜ. 25 (DaijiworldNews/SM): ಕಾರ್ಕಳ-ಬಜಗೋಳಿ ರಾಷ್ಟ್ರೀಯ ಹೆದ್ದಾರಿ ಮಿಯ್ಯಾರು ಎಂಬಲ್ಲಿ ಬುಧವಾರ ಬೆಳಿಗ್ಗೆ ಕಾರು-ರಿಕ್ಷಾ ಮುಖಾಮುಖಿ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಸ್ಥಳದಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಬಜಗೋಳಿ ಚಿರಾಗ್ ಎದುರುಗಡೆಯ ನಿವಾಸಿ ರಿಕ್ಷಾ ಚಾಲಕ ಚಂದ್ರ ಶೇಖರ್ ಮಡಿವಾಳ(55) ಮೃತಪಟ್ಟ ದುರ್ದೈವಿ. ಆವರ ತಮ್ಮ ದಿವಾಕರ ಮಡಿವಾಳ(52) ಗಾಯಾಳು. ಇವರಿಬ್ಬರು ಕಾರ್ಕಳದ ಆಸ್ಪತ್ರೆಗೆ ಹೋಗಿ ಮನೆಗೆ ರಿಕ್ಷಾದಲ್ಲಿ ಹಿಂತಿರುಗುತ್ತಿದ್ದಾಗ ನಾರಾವಿ ಕಡೆಯಿಂದ ಕಾರ್ಕಳಕ್ಕೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದಿತ್ತು.
ಅಪಘಾತದ ತೀವ್ರತೆಗೆ ರಿಕ್ಷಾ ಸಂಪೂರ್ಣ ನುಜ್ಜುಗುಜ್ಜಾಗಿದೆ. ಕಾರು ಚಾಲಕ ತೀಥೇಶ್ ಗೆ ಸಣ್ಣಪುಟ್ಟ ರೀತಿಯಲ್ಲಿ ಗಾಯವಾಗಿದ್ದು, ನಗರದ ಸಿಟಿ ಆಸ್ಪತ್ರೆಯಲ್ಲಿ ಹೊರರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಕೇಸುದಾಖಲಾಗಿದೆ.