ಮಂಗಳೂರು, ಜ 27 (DaijiworldNews/HR): ಮರಕಡ ಗುರು ಪರಾಶಕ್ತಿ ಮಠದ ಶ್ರೀ ನರೇಂದ್ರನಾಥ ಸ್ವಾಮೀಜಿ ಅವರು ಗುರುವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
ಶ್ರೀ ನರೇಂದ್ರನಾಥ ಸ್ವಾಮೀಜಿಯವರು ಮರಕಡದಲ್ಲಿ ಬೃಹತ್ ಆದಿಶಕ್ತಿ ದೇವಾಲಯವನ್ನು ನಿರ್ಮಿಸಿದ್ದು, ಫೆಬ್ರವರಿ ತಿಂಗಳಲ್ಲಿ ಈ ದೇವಸ್ಥಾನದ ಬ್ರಹ್ಮಕಲಶೋತ್ಸವ ನಡೆಸಲು ನಿರ್ಧರಿಸಿದ್ದರು.
ಈ ಸಂಬಂಧ ಬುಧವಾರ ಸಂಜೆ ಸಭೆ ನಡೆದಿದ್ದು, ಸ್ವಾಮೀಜಿ ಅವರು ಅಸ್ವಸ್ಥರಾಗಿದ್ದರಿಂದ ಸಭೆಯಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ.
ಇನ್ನು ಸ್ವಾಮೀಜಿ ಅವರ ಹಠಾತ್ ನಿಧನದಿಂದ ಅಪಾರ ಸಂಖ್ಯೆಯ ಶಿಷ್ಯವರ್ಗ ಶೋಕ ಸಾಗರದಲ್ಲಿ ಮುಳುಗಿಸಿದೆ.