ಕಾಸರಗೋಡು, ಜ 28 (DaijiworldNews/HR): ಚಂದ್ರಗಿರಿ ನದಿಯಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿದ ಕಾಸರಗೋಡು ನಗರ ಠಾಣಾ ಪೊಲೀಸರು ಮರಳುಗಾರಿಕೆಯಲ್ಲಿ ತೊಡಗಿದ್ದ ಏಳು ದೋಣಿಗಳನ್ನು ವಶಪಡಿಸಿಕೊಂಡಿರುವ ಘಟನೆ ನಡೆದಿದೆ.
ವಶ ಪಡಿಸಿಕೊಂಡ ಏಳು ದೋಣಿಗಳನ್ನು ಬಳಿಕ ಧ್ವಂಸ ಮಾಡಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇನ್ನು ಪೊಲೀಸರಿಗೆ ಲಭಿಸಿದ ಖಚಿತ ಮಾಹಿತಿಯಂತೆ ಕಾರ್ಯಾಚರಣೆ ನಡೆಸಿ ಮರಳುಗಾರಿಕೆಯಲ್ಲಿ ತೊಡಗಿದ್ದ ಏಳು ದೋಣಿಗಳನ್ನು ವಶಪಡಿಸಿಕೊಂಡಿದ್ದಾರೆ.