ಬಂಟ್ವಾಳ, ಜ 30 (DaijiworldNews/HR): ಬಂಟ್ವಾಳ ಸಜಿಪಮುನ್ನೂರು ಗ್ರಾಮದ ಮಡಿವಾಳಪಡ್ಪು ನಿವಾಸಿ ದೇವಪ್ಪ ಮಡಿವಾಳ (60) ಶನಿವಾರ ಪಾಣೆಮಂಗಳೂರಿನ ನಂದಾವರ ಸಂಪರ್ಕದ ಕಿರುಸೇತುವೆಯಿಂದ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮುಗುಳ್ಯ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿದ್ದ ಅವರು ಪ್ರಗತಿಪರ ಕೃಷಿಕರಾಗಿದ್ದರು.
ಮನೆಯಿಂದ ಬೆಳಗ್ಗೆ ಪೇಟೆಯಿಂದ ಹೊರಟ ಅವರು ಪಾಣೆಮಂಗಳೂರು ಕಿರುಸೇತುವೆ ಬಳಿ ನೀರಿಗೆ ಹಾರಿದ್ದಾರೆ. ಸ್ಥಳೀಯರು ಇದನ್ನು ಗಮನಿಸಿ ಮಾಹಿತಿ ನೀಡಿದ್ದು ಬಂಟ್ವಾಳ ನಗರ ಠಾಣೆ ಪೊಲೀಸರು ಸ್ಥಳಕ್ಕೆ ಧಾವಿಸಿದ್ದರು. ಸ್ಥಳೀ ರ ನೆರವಿನಿಂದ ಮೃತದೇಹವನ್ನು ಮೇಲೆತ್ತಲಾಗಿದೆ.
ಈ ಬಗ್ಗೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821