ಮಂಗಳೂರು, ಜ 31 (DaijiworldNews/HR): 2021-2022ನೇ ಸಾಲಿನ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಿಂದ ಆಯ್ಕೆಯಾದ ಮಂಗಳೂರಿನ ಪ್ರಥಮ ಪಿಯು ವಿದ್ಯಾರ್ಥಿನಿ ಕಲೆ, ಸಂಸ್ಕೃತಿ ವಿಭಾಗದಲ್ಲಿ ಪ್ರಶಸ್ತಿ ವಿಜೇತೆ ಭರತ ನಾಟ್ಯ ಕಲಾವಿದೆ ರೆಮೋನಾ ಇವೆಟ್ ಪಿರೇರಾ ಅವರನ್ನು ಭಾರತೀಯ ಜನತಾ ಪಾರ್ಟಿ ರಾಜ್ಯ ಮಹಿಳಾ ಮೋರ್ಚ ಪ್ರಧಾನ ಕಾರ್ಯದರ್ಶಿಗಳಾದ ಶಿಲ್ಪಾ ಸುವರ್ಣ, ಭಾಜಪಾ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಮೋರ್ಚಾ ಹಾಗೂ ಮಂಗಳೂರು ದಕ್ಷಿಣ ಮಂಡಲ ಮಹಿಳಾ ಮೋರ್ಚಾ ವತಿಯಿಂದ ಅವರ ಸ್ವಗೃಹದಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಧನಲಕ್ಷ್ಮಿ ಗಟ್ಟಿ ಮಾತನಾಡಿ, ಒಬ್ಬ ತಾಯಿ ಬಾಲ್ಯದಲ್ಲಿ ತಮ್ಮಲ್ಲಿ ಭರತನಾಟ್ಯದ ಬಗ್ಗೆ ಇದ್ದ ಆಸಕ್ತಿಯನ್ನು ಈಡೇರಿಸಿಕೊಳ್ಳಲಾಗದೆ ಆ ಇಚ್ಛೆಯನ್ನು ತಮ್ಮ ಮಗಳಲ್ಲಿ ಪ್ರೋತ್ಸಾಹಿಸಿ ಭರತನಾಟ್ಯದಲ್ಲಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಉತ್ತುಂಗಕ್ಕೆ ಏರಲು ಮಾರ್ಗದರ್ಶಕರಾಗಿದ್ದಾರೆ" ಎಂದರು.
ರಾಜ್ಯ ಮಹಿಳಾ ಮೋರ್ಚದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಶಿಲ್ಪಾ ಸುವರ್ಣ ಮಾತನಾಡಿ, ಬಾಲ ಪುರಸ್ಕಾರ ಕಾರ್ಯಕ್ರಮದಲ್ಲಿ ರೆಮೋನಾರವರ ಜೊತೆ ಪ್ರಧಾನಿಯವರು ಸಂದರ್ಶನ ಮಾಡುವಾಗ ತಮ್ಮ ತಾಯಿಯನ್ನು ಬಹಳಷ್ಟು ಬಾರಿ ಉಲ್ಲೇಖ ಮಾಡಿದ್ದನ್ನು ನಾನು ಗಮನಿಸಿದೆ" ಎಂದರು.
ಈ ಸಂದರ್ಭದಲ್ಲಿ ರಾಜ್ಯ ಮಹಿಳಾ ಮೋರ್ಚಾದ ಅಧ್ಯಕ್ಷರಾದ ಶ್ರೀಮತಿ ಗೀತಾ ವಿವೇಕಾನಂದರವರು ದೂರವಾಣಿಯ ಮುಖಾಂತರ ಅವಳ ಉಜ್ವಲ ಭವಿಷ್ಯಕ್ಕಾಗಿ ಶುಭ ಹಾರೈಸಿದರು.
ಜಿಲ್ಲಾ ಕಾರ್ಯದರ್ಶಿಗಳಾದ ಪೂಜ ಪೈ, ಮಹಿಳಾ ಮೋರ್ಚದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಸೇವಂತಿ ಶ್ರೀಯಾನ್, ಜಿಲ್ಲಾ ಮಹಿಳಾ ಮೋರ್ಚಾದ ಉಪಾಧ್ಯಕ್ಷರಾದ ಶ್ರೀಮತಿ ಆಶಾ ಡಿಸಿಲ್ವ, ಮಂಗಳೂರು ದಕ್ಷಿಣ ಮಂಡಲದ ಮಹಿಳಾ ಮೋರ್ಚದ ಪ್ರಧಾನ ಕಾರ್ಯದರ್ಶಿ ಶ್ರೀಮತಿ ಹರಿಣಿಪ್ರೇಮ್, ಉಪಾಧ್ಯಕ್ಷರಾದ ರೂಪಾ ಕೆ ಎಸ್, ಕಾರ್ಯದರ್ಶಿ ಲಲಿತಾ ಹಾಗೂ ಪ್ರಿಯಾ ಕೋಟ್ಯಾನ್ ಖಜಾಂಜಿ ಮಾಲತಿ ಅರುಣ್, ಸದಸ್ಯರುಗಳಾದ ಚಂಚಲಾಕ್ಷಿ, ಭಾರತಿ ಕಿಣಿ, ಗೀತಾ ಹಾಗೂ ಜ್ಯೋತಿ ಯಲ್ಬುರ್ಗಿ ಉಪಸ್ಥಿತರಿದ್ದರು.