ಉಡುಪಿ, ಜ. 31 (DaijiworldNews/SM): ಹಿಜಾಬ್ ಇಲ್ಲದೆ ತರಗತಿಗೆ ಹಾಜರಾಗುವುದಾದರೆ ಮಾತ್ರ ಬನ್ನಿ. ಇಲ್ಲವಾದಲ್ಲಿ ಕಾಲೇಜು ಆವರಣಕ್ಕೆ ಆಗಮಿಸದಿರಿ ಎಂದು ಶಾಸಕ ರಘುಪತಿ ಭಟ್ ತಿಳಿಸಿದ್ದಾರೆ.
ಉಡುಪಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಸಮವಸ್ತ್ರ ವಿಚಾರವಾಗಿ ಸದ್ಯ ಸರಕಾರ ಹೊರಡಿಸಿದ ಮಾರ್ಗಸೂಚಿಯನ್ವಯ ವಿದ್ಯಾರ್ಥಿಗಳು ಸಹಕಾರವನ್ನು ನೀಡಬೇಕು. ಈ ಬಗ್ಗೆ ವಿದ್ಯಾರ್ಥಿನಿಯರನ್ನು ಪ್ರತ್ಯೇಕವಾಗಿ ಮಾತುಕತೆ ನಡೆಸಲಾಗಿದೆ. ವಿದ್ಯಾರ್ಥಿನಿಯರ ಪೋಷಕರು, ಮುಸ್ಲಿಂ ಮುಖಂಡರ ಜೊತೆಗೂ ಮಾತುಕತೆ ನಡೆಸಲಾಗಿದೆ. ಅವರ ನಿರ್ಧಾರವನ್ನು ತಿಳಿಸುವುದಾಗಿ ಹೇಳಿದ್ದಾರೆ. ಆದರೆ, ಯಾವುದೇ ಕಾರಣಕ್ಕೂ ಮಂಗಳವಾರದಿಂದ ತರಗತಿಗೆ ಹಾಜರಾಗುವುದಾದಲ್ಲಿ ತರಗತಿಯೊಳಗೆ ಹಿಜಾಬ್ ಧರಿಸಲು ಅವಕಾಶವಿಲ್ಲ ಎಂದು ಶಾಸಕರು ಸ್ಪಷ್ಟಪಡಿಸಿದ್ದಾರೆ.