ಉಡುಪಿ, ಫೆ 04(DaijiworldNews/MS): ಅವನ್ಯಾವನೋ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ನಿಮ್ಮಂತೆ ಸ್ವಕ್ಷೇತ್ರದಲ್ಲಿ ಜನರಿಂದ ತಿರಸ್ಕೃತಗೊಂಡವನಲ್ಲ ಶಾಸಕ ರಘುಪತಿ ಭಟ್ ತಿರುಗೇಟು ನೀಡಿದ್ದಾರೆ.
ಈ ಬಗ್ಗೆ ಟ್ವೀಟರ್ ನಲ್ಲಿ ಬರೆದುಕೊಂಡಿರುವ ಶಾಸಕರು " ರಘುಪತಿ ಭಟ್ ಯಾರು ಎಂದು ಪ್ರಶ್ನಿಸುವ ಸಿದ್ದರಾಮಯ್ಯ ಅವರೇ,ನಾನು ಜನರಿಂದ ಆಯ್ಕೆಯಾದವನು, ನಿಮ್ಮ ಹಾಗೆ ಸ್ವಕ್ಷೇತ್ರದಲ್ಲಿ ಜನರಿಂದ ತಿರಸ್ಕೃತಗೊಂಡು, ಬೇರೆಯವರ ಕ್ಷೇತ್ರದ ಮೇಲೆ ಅವಲಂಬಿತನಾದವನಲ್ಲ.ನನ್ನ ಕ್ಷೇತ್ರದ ಸಮಸ್ಯೆಗೆ ಧ್ವನಿಯಾಗುವುದು ನನಗೆ ಸಂವಿಧಾನ ಕಲ್ಪಿಸಿದ ಹಕ್ಕು. ಅದನ್ನು ನಿಮ್ಮಿಂದ ಕಲಿಯಬೇಕಿಲ್ಲ" ಎಂದು ವಾಗ್ದಾಳಿ ನಡೆಸಿದ್ದಾರೆ.
ಉಡುಪಿ ಸರ್ಕಾರಿ ಪಿಯು ಕಾಲೇಜಿನಲ್ಲಿ ತಲೆದೋರಿರುವ ಹಿಜಬ್-ಕೇಸರಿ ಶಾಲು ವಿವಾದ ಕುರಿತು ಮಾತನಾಡಿದ್ದ ಸಿದ್ದರಾಮಯ್ಯ, ಹಿಜಬ್ ಹಾಕುವುದು ಮೂಲಭೂತ ಹಕ್ಕು ಎಂದು ಹೇಳಿ್ ಅವನ್ಯಾವನೋ ಶಾಸಕ ರಘುಪತಿ ಭಟ್, ಅವನು ಹೇಳಿದನಂತೆ ಇವನು ತಡೆದನಂತೆ. ಅವನು ಯಾರು ಹೇಳೋಕೆ ಹೆಣ್ಣುಮಕ್ಕಳಿಗೆ ಯುನಿಫಾರ್ಮ್ ಬರಬೇಕು ಎಂದು ಏಕವಚನದಲ್ಲಿ ಕಿಡಿಕಾರಿದ್ದರು.