ಕಾಸರಗೋಡು, ಫೆ 05 (DaijiworldNews/HR): ಹತ್ತನೇ ತರಗತಿ ವಿದ್ಯಾರ್ಥಿಯೋರ್ವ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಪೆರ್ಲ ಸಮೀಪದ ಶೇಣಿಯಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಮೃತಪಟ್ಟ ವಿದ್ಯಾರ್ಥಿಯನ್ನು ಶೇನಿಯ ಕೃಷ್ಣರವರ ಪುತ್ರ ಶ್ರವಣ್ ರಾಜ್ (15) ಎಂದು ಗುರುತಿಸಲಾಗಿದೆ.
ಶೇಣಿ ಖಾಸಗಿ ಹಯರ್ ಸೆಕೆಂಡರಿ ಶಾಲೆಯ ವಿದ್ಯಾರ್ಥಿಯಾಗಿದ್ದು, ಶುಕ್ರವಾರ ಸಂಜೆ ಆಟವಾಡಲೆಂದು ಮನೆಯಿಂದ ಹೊರಟಿದ್ದ ಶ್ರವಣ್ ರಾಜ್ ರಾತ್ರಿ ಮರಳಿ ಮನೆಗೆ ಬರದಿರುವುದರಿಂದ ಹುಡುಕಾಡಿದಾಗ ಮನೆಯ ಅಲ್ಪ ದೂರದ ಮಾವಿನ ಮರದ ರೆಂಬೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.
ಬದಿಯಡ್ಕ ಪೊಲೀಸರು ಮಹಜರು ನಡೆಸಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತ ದೇಹವನ್ನು ಸಂಬಂಧಿಕರಿಗೆ ಬಿಟ್ಟು ಕೊಡಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821