ಮಂಗಳೂರು, ಫೆ 07 (DaijiworldNews/HR): ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ಯಿಯಲ್ಲಿ ನಡೆದಿದ್ದ ಶ್ರೀ ಗಂಧ ಮರ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಮಜೀದ್, ಶರೀಫ್, ಲಕ್ಷಣ ಶೆಟ್ಟಿ ಎಂದು ಗುರುತಿಸಲಾಗಿದೆ.
ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಂದ 25,000 ಮೌಲ್ಯದ 41.1 ಕೆ.ಜಿ ತೂಕದ 14 ಶ್ರೀ ಗಂಧ ಮರದ ತುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.
ಇನ್ನು ಕಳೆದ ವರ್ಷ ಮಂಗಳೂರು ವಿಶ್ವವಿದ್ಯಾಲಯದ ಆವರಣದಲ್ಲಿ ಶ್ರೀ ಗಂಧ ಮರ ಕಳವು ಪ್ರಕರಣ ವರದಿಯಾಗಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಮಾಹಿತಿ ಪಡೆದು ಕೆ.ಸಿ ನಗರದಲ್ಲಿ ವಾಸವಿರುವ ಮಜೀದ್ ಮತ್ತು ಕೆಸಿ ರೋಡ್ ನಲ್ಲಿರುವ ಹಸೈನಾರ್ ಎಂಬವರನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ.