ಉಡುಪಿ,ಫೆ 07 (DaijiworldNews/KP): ಸರ್ಕಾರದ ಆದೇಶವನ್ನು ಅನುಷ್ಟಾನಗೊಳಿಸುವುದು ಶಿಕ್ಷಣ ಇಲಾಖೆಯ ಜವಾಬ್ದಾರಿಯಾಗಿದೆ, ಎಲ್ಲ ಕಾಲೇಜುಗಳು ಆ ನಿಯವನ್ನು ಪಾಲಿಸಬೇಕು ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರವು ಶಾಲಾ ಕಾಲೇಜಿನ ವಸ್ತ್ರಸಂಹಿತೆ ಕುರಿತಂತೆ ಈಗಾಗಲೇ ಆದೇಶ ಹೊರಡಿಸಿದೆ, ಅದರಂತೆ ಎಲ್ಲಾ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು ಸಮವಸ್ತ್ರ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು, ಎಲ್ಲ ವಿದ್ಯಾರ್ಥಿಗಳಿಗೆ ಒಂದೇ ನ್ಯಾಯ ಇದರಲ್ಲಿ ಯಾವುದೇ ಗೊಂದಲವಿಲ್ಲ ಎಂದರು.
ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಈ ಬಾರಿಯ ಬಜೆಟ್ನಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಕಳೆದ ಬಾರಿಗಿಂತ ಎರಡು ಪಟ್ಟು ಹೆಚ್ಚು ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದರು
ಇನ್ನು ಕಳೆದ ಬಾರಿ ಕೋವಿಡ್ ಕಾರಣದಿಂದ ಅನುದಾನ ಸ್ವಲ್ಪ ಮಟ್ಟಿಗೆ ಕಡಿತಗೊಂಡು 3500 ದಿಂದ 4 ಸಾವಿರ ಕೋಟಿ ಅನುದಾನ ದೊರಕಿತ್ತು. ಹಾಗಾಗಿ ಈ ಸಲ ಬಜೆಟ್ ನಲ್ಲಿ ಕಳೆದ ಬಾರಿಗಿಂತ ಎರಡು ಪಟ್ಟು ಹೆಚ್ಚು ಅನುದಾನ ನೀಡುವಂತೆ ಸಿಎಂಗೆ ಮನವಿ ಮಾಡಲಾಗುವುದು ಎಂದರು.