ವಿಟ್ಲ, ಫೆ 09 (DaijiworldNews/MS): ವಿದ್ಯುತ್ ಬಿಲ್ ಕೊಡುವ ನೆಪದಲ್ಲಿ ದರೋಡೆಕೋರರು ಮನೆಯ ಆವರಣ ಪ್ರವೇಶಿಸಿ ಮಹಿಳೆಗೆ ಕತ್ತಿಯಿಂದ ಹಲ್ಲೆ ನಡೆಸಿ, ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬುಧವಾರ ಮಧ್ಯಾಹ್ನ ಇಲ್ಲಿನ ಅಡ್ಡದ ಬೀದಿಯಲ್ಲಿ ನಡೆದಿದೆ.
ಸುಲೈಮಾನ್ ಅವರ ಪತ್ನಿ ಬೀಪಾತುಮ್ಮ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಬೀಪಾತುಮ್ಮ ಒಂಟಿಯಾಗಿರುವುದನ್ನು ಗಮನಿಸಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಹಲ್ಲೆ ನಡೆಸಿ, ಚಿನ್ನಾಭರಣ ದೋಚಿದ್ದಾರೆ.
ಪತಿ ಸುಲೈಮಾನ್ ಅವರು ಅಡ್ಡದ ಬೀದಿಯಲ್ಲಿ ಎಳನೀರು ವ್ಯಾಪಾರ ಮಾಡುತ್ತಿದ್ದು, ಮಧ್ಯಾಹ್ನ ಮನೆಗೆ ಬಂದು ಹಿಂತಿರುಗಿದ್ದರು ಎಂದು ತಿಳಿದುಬಂದಿದೆ.