ಬಂಟ್ವಾಳ, ಫೆ. 10 (DaijiworldNews/SM): ಬಾರೊಂದರಲ್ಲಿ ಕುಡಿದು ಕ್ಷುಲಕ ಕಾರಣಕ್ಕೆ ಜಗಳ ಮಾಡಿಕೊಂಡು ಬಳಿಕ ಇರಿತಕ್ಕೊಳಗಾಗಿ ಇಬ್ಬರು ಗಾಯಗೊಂಡ ಘಟನೆ ಬಂಟ್ವಾಳ ಬೈಪಾಸ್ ಜಂಕ್ಷನ್ ಬಳಿ ಫೆ. 9ರಂದು ನಡೆದಿದೆ.
ಯಾವುದೋ ಕ್ಷುಲಕ ಕಾರಣಕ್ಕೆ ಯುವಕರ ಮಧ್ಯೆ ಜಗಳ ನಡೆದಿದ್ದು, ಈ ವೇಳೆ ಚೂರಿಯಿಂದ ಇರಿದುಕೊಂಡಿದ್ದಾರೆ.
ಇರಿತದ ಪರಿಣಾಮ ಕಿಶೋರ್ ಹಾಗೂ ದಯಾನಂದ್ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಪ್ರಕರಣದ ಆರೋಪಿಗಳಾದ ಅರ್ಬಿಗುಡ್ಡೆ ನಿವಾಸಿಗಳಾದ ಸುಚಿತ್, ಸಚಿನ್, ಧನು ಹಾಗೂ ಪುರುಷ ವಿರುದ್ಧ ಪ್ರಕರಣ ದಾಖಲಾಗಿದ್ದು, ಅವರ ಪತ್ತೆಗಾಗಿ ಬಂಟ್ವಾಳ ನಗರ ಪೊಲೀಸರು ಬಲೆ ಬೀಸಿದ್ದಾರೆ.