ಉಡುಪಿ, ಫೆ 13 (DaijiworldNews/KP): ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್ ಕಚೇರಿಯಲ್ಲಿ ಜಿಲ್ಲಾಡಳಿತ ನೇತೃತ್ವದಲ್ಲಿ ಮಹತ್ವದ ಶಾಂತಿ ಸಭೆಯನ್ನು ಆಯೋಜಿಸಲಾಗಿತ್ತು.
ಇನ್ನು ಶಾಂತಿ ಸಭೆಯಲ್ಲಿ ಮಾತನಾಡಿದ ತಹಶಿಲ್ದಾರ್ ಪ್ರದೀಪ್ ಕುರ್ಡೇಕರ್, ಉಡುಪಿಯು ಶೈಕ್ಷಣಿಕ ಕ್ಷೇತ್ರದಲ್ಲಿ ಎಲ್ಲ ಜಿಲ್ಲೆಗಳಿಗೆ ಮಾದರಿಯಾಗಿದೆ, ಅಂತಹ ವಿದ್ಯಾದಾನ ಮಾಡುವ ಜಿಲ್ಲೆಯಲ್ಲಿ ಶಾಂತಿಗೆ ಭಂಗವಾಗಬಾರದು. ಜಿಲ್ಲೆಯಲ್ಲಿ ಶಾಂತಿ ಸುವ್ಯಸ್ಥೆಯನ್ನು ಕಾಪಾಡುವುದು ಎಲ್ಲ ಸಂಘಟನೆಯ ಕರ್ತವ್ಯವಾಗಿದೆ. ಹಾಗಾಗಿ ಕೋರ್ಟ್ ಆದೇಶ ಬರುವವರೆಗೂ ಮಕ್ಕಳು ಕಾಲೇಜಿಗೆ ಸಮವ್ತ್ರವನ್ನು ಹಾಕಿಕೊಂಡು ಬರಬೇಕು ಎಂದು ಹೇಳಿದರು.
ಕೋರ್ಟ್ ಆದೇಶದಂತೆ ಹೈಸ್ಕೂಲ್ ಅನ್ನು ಆರಂಭಿಸಲಾಗುವುದು ವಿದ್ಯಾರ್ಥಿಗಳ ಎಂದಿನಂತೆ ಶಾಲೆಗೆ ಬರಬೇಕು, ಅವರ ಶಿಕ್ಷಣಕ್ಕೆ ಯಾವುದೇ ಸಮಸ್ಯೆಯಾಗುವುದೆಲ್ಲ ಎಂದು ಉಡುಪಿ ಶಾಸಕ ರಘಪತಿ ಭಟ್ ಹೇಳಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಸದ್ಯ ಕೋರ್ಟ್ ಆದೇಶದಂತೆ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳು ಹಿಜಾಬ್ ಅಥವಾ ಕೇಶರಿ ಶಾಲುಗಳನ್ನು ಧರಿಸಿಕೊಂಡು ಬರುವಂತಿಲ್ಲ, ಬದಲಾಗಿ ಕಾಲೇಜಿನ ನಿಯಮದಂತೆ ವಿದ್ಯಾರ್ಥಿಗಳು ಸಮವಸ್ತ್ರವನ್ನು ಹಾಕಿಕೊಂಡು ಬರಬೇಕು ಎಂದು ಹೇಳಿದ್ದಾರೆ
ಜಿಲ್ಲೆಯಲ್ಲಿ ಶಾಂತಿ ಸುವ್ಯಸ್ಥೆ ನೇಲೆಸುವ ನಿಟ್ಟಿನಲ್ಲಿ ಎಲ್ಲ ಸಂಘಟನೆಯ ಮುಖಂಡರನ್ನು ಸೇರಿಸಿ ಸಭೆ ಕರೆಯಲಾತ್ತು, ಆದರೆ ಮುಸ್ಲಿಂ ವಿದ್ಯಾರ್ಥಿನಿಯರನ್ನು ಬೆಂಬಲಿಸಿದ ಸಿಎಫ್ಐ ಸಂಘಟನೆಯು ಈ ಸಭೆಗೆ ಹಾಜಾರಾಗಲಿಲ್ಲ.