ಮಂಗಳೂರು, ಫೆ. 14 (DaijiworldNews/SM): ನಗರದ ಕೆಪಿಟಿ ಅಂಡರ್ ಪಾಸ್ ಟೆಂಡರ್ ಹಂತದಲ್ಲಿದೆ. ನಂತೂರು ಪ್ಲೈ ಓವರ್ ಈಗಾಗಲೇ ಅನುಮೋದನೆಯಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಮಾಧ್ಯಮಕ್ಕೆ ಮಾಹಿತಿ ನೀಡಿದ ಅವರು, ಕೂಳೂರು ಸೇತುವೆಯ ಕಾಮಗಾರಿಗಳು ನಡೆದಿದೆ. ಬಿಕರ್ನಕಟ್ಟೆಯಿಂದ ಕಾರ್ಕಳ ರಸ್ತೆ ಚತುಷ್ಪಥ ಕಾಮಗಾರಿ ಆರಂಭವಾಗಿದೆ. 2023ಕ್ಕೆ ಮಂಗಳೂರು ಸಂಪರ್ಕಿಸುವ ಎಲ್ಲಾ ರಸ್ತೆಗಳು ಚತುಷ್ಪಥಗೊಳ್ಳಲಿದೆ ಎಂದು ಸಂಸದ ನಳಿನ್ ಹೇಳಿದ್ದಾರೆ.
10 ಸಾವಿರ ಕೋಟಿಗಿಂತ ಹೆಚ್ಚು ಅನುದಾನ ಬಂದಿದೆ. ನರೇಂದ್ರ ಮೋದಿ ಸರ್ಕಾರದಿಂದ ಅನುದಾನ ಒದಗಿದೆ. ಕೋವಿಡ್ ಸಂದರ್ಭದಲ್ಲೂ ಅಭಿವೃದ್ಧಿ ಕಾರ್ಯ ಕುಂಠಿತವಾಗಿಲ್ಲ. ಜಿಲ್ಲೆಗೆ ಅನುದಾನ ಒದಗಿಸಿದ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಎಂಬುವುದಾಗಿ ಮಂಗಳೂರಿನಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ.