ಉಡುಪಿ, ಫೆ 14 (DaijiworldNews/KP): ನ್ಯಾಯಾಲಯದ ಮಧ್ಯಂತರ ಆದೇಶದಂತೆ ಉಡುಪಿಯ ಎಲ್ಲ 9 ಮತ್ತು 10ನೇ ತರಗತಿಗಳನ್ನು ಆರಂಭಿಸಲಾಗಿದ್ದು, ವಿದ್ಯಾರ್ಥಿಗಳು ಕೋರ್ಟ್ ಆದೇಶವನ್ನು ಪಾಲಿಸಿ ಶಾಲೆಗಳಿಗೆ ಸಮವಸ್ತ್ರ ಧರಿಸಿ ಬಂದಿದ್ದಾರೆ ಎಂದು ಉಡುಪಿಯ ತಹಶೀಲ್ದಾರ್ ಪ್ರದೀಪ್ ಕುರುಡೇಕರ್ ಹೇಳಿದ್ದಾರೆ.
ಹಿಜಾಬ್-ಕೇಸರಿ ಶಾಲು ವಿವಾದದಿಂದ ಬಂದ್ ಆಗಿದ್ದ 9 ಮತ್ತು 10ನೇ ತರಗತಿ ಇಂದಿನಿಂದ ಮತ್ತೆ ಆರಂಭವಾದ ಹಿನ್ನಲೆಯಲ್ಲಿ ಉಡುಪಿಯ ತಹಶೀಲ್ದಾರ್ ಪ್ರದೀಪ್ ಕುರುಡೇಕರ್ ಶಾಲೆಗಳಿಗೆ ಭೇಡಿ ನೀಡಿದ್ದು, ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿದ್ಯಾರ್ಥಿಗಳು ಕೋರ್ಟ್ ಆದೇಶದಂತೆ ಶಾಲೆಗಳಿಗೆ ಸಮವಸ್ತ್ರ ಧರಿಸಿ ಬಂದಿದ್ದು, ಕೆಲ ಶಾಲೆಗಳಲ್ಲಿ ಶಾಂತಿಯುತವಾಗಿ ಪರೀಕ್ಷೆಯನ್ನು ನಡೆಲಾಗುತ್ತಿದೆ ಎಂದು ಹೇಳಿದ್ದಾರೆ.
ಇನ್ನು ಕೆಲ ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಆವರಣಕ್ಕೆ ಪ್ರವೇಶ ಮಾಡಿದ್ದರು, ಆದರೆ ಸರಕಾರಿ ನಿಯಮಾವಳಿಯಂತೆ ಎಲ್ಲ ಮುಸ್ಲಿಂ ವಿದ್ಯಾರ್ಥಿಗಳನ್ನು ಹಿಜಾಬ್ ತೆಗೆದು ಪರೀಕ್ಷ ಕೊಠಡಿಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಈಗಾಗಲೇ ಜಿಲ್ಲಾಧಿಕಾರಿ ಸೂಕ್ಷ್ಮ ಪ್ರದೇಶಗಳಲ್ಲಿರುವ ಶಾಲೆಗಳ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಸೆಕ್ಷನ್ 144 ಜಾರಿಗೊಳಿಸಿದ ನಿಟ್ಟಿನಲ್ಲಿ ಅಲ್ಲಲ್ಲಿ ಪೋಲಿಸ್ ಸಿಬ್ಬಂದಿ ನೇಮಕ ಮಾಡಲಾಗಿದೆ ಎಂದು ಹೇಳಿದ್ದಾರೆ.